Home / ಕವನ / ಕವಿತೆ / ಬೇಸರವೇತಕೋ ಮನವೇ

ಬೇಸರವೇತಕೋ ಮನವೇ

ನೇಸರದಾ ತಂಪಲ್ಲಿ ಈಶನಿಹನೋ
ಬೇಸರವೇತಕೋ ಮನವೇ

ಈಶ ಮಹೇಶ ಪ್ರಭು ಮಲ್ಲೇಶ
ಈಶ ಲಿಂಗೇಶ ಸರ್ವೇಶನವನು
ಬೇಸರವೇತಕೋ ಮನವೇ

ಸತಿ ಶಕ್ತಿಯು ಸಸ್ಯ ಶ್ಯಾಮಲೆ
ಜೀವ ಕೋಟಿಗೆ ಉಸಿರಾಗಿಹಳು
ಬೇಸರವೇತಕೋ ಮನವೇ

ರೆಂಬೆಕೊಂಬೆಗಳಲ್ಲಿ ಹಸಿರು ಎಲೆ
ಬಣ್ಣ ಚಿತ್ತಾರ ನಾದ ಇಂಚರದಲಿ
ಈಶನು ಬೇಸರವೇತಕೋ ಮನವೇ

ಸುಯ್‌ಗುಟ್ಟುವ ತಂಗಾಳಿ ಧರೆ ಆಗಸ
ಕಲ್ಲು ಮಣ್ಣು ಬಂಡೆ ದಡದದಲ್ಲಿಹನು
ಬೇಸರವೇತಕೋ ಮನವೇ

ಧರ್ಮ ಕರ್ಮ ಮರ್ಮ ಭೇದಗಳಲ್ಲಿ
ಸುಳ್ಳು ಮೋಸ ಕಪಟ ವಂಚನೆ ಮೋಹದಲ್ಲಿಹನೊ
ಎಚ್ಚರ! ಬೇಸರವೇತಕೋ ಮನವೇ

ನ್ಯಾಯ ಅನ್ಯಾಯಗಳ ಬೆಲೆಯ ಕಟ್ಟಿ ಹಿಡಿದು
ನೋಡುವಾತನು ಜನ್ಮ ಚಕ್ರದಾತ ಮುಕ್ಕಣನೂ
ಬೇಸರವೇತಕೋ ಮನವೇ

ವೇಷಭೂಷಣ ಜಂಗಮ ಸಂಗಮ ಉಂಬಲಿಂಗ
ಮಹೇಂದ್ರನೂ ಮಸಣವಾಸಿ ರುದ್ರನಿವನು
ಬೇಸರವೇತಕೋ ಮನವೇ

ದಾನ ಮಾನಿಯೂ ಅನ್ನದಾತ ಯೋಗಿಯು
ಭಾಗಿಯಾಗಿ ಮೌನದಲ್ಲಿ ಅವನು
ಬೇಸರವೇತಕೋ ಮನವೇ

ಶಿಷ್ಟನಾಗಿ ವಿಶಿಷ್ಟ ಜ್ಞಾನಿಯಾಗೋ
ಬೇಸರವೆಂದರೆ ಅರ್ಥವಿಲ್ಲ ಕಾಯಕ
ಸಿದ್ದಿ ಮಾಯಕ ಭವಭಾವ ಸಿದ್ದ ನೀನು
ಸರ್ವಾಂತರ್ಯಾಮಿ ಅವನ ಕಾಣಬೇಕು ಮನುಜ

ಬೇಸರವಿಲ್ಲದ ನೇಸರ ತಂಪಲ್ಲಿ
ವಿಹರಿಸು ಚೈತನ್ಯ ತುಂಬಿ
ನೇಸರನ ಗೆಲುವಿನ ಹಾದಿಯಲಿ
ನಡೆಯಬೇಕು ಮನುಜ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...