Home / ಕವನ / ಕವಿತೆ / ಬೇಸರವೇತಕೋ ಮನವೇ

ಬೇಸರವೇತಕೋ ಮನವೇ

ನೇಸರದಾ ತಂಪಲ್ಲಿ ಈಶನಿಹನೋ
ಬೇಸರವೇತಕೋ ಮನವೇ

ಈಶ ಮಹೇಶ ಪ್ರಭು ಮಲ್ಲೇಶ
ಈಶ ಲಿಂಗೇಶ ಸರ್ವೇಶನವನು
ಬೇಸರವೇತಕೋ ಮನವೇ

ಸತಿ ಶಕ್ತಿಯು ಸಸ್ಯ ಶ್ಯಾಮಲೆ
ಜೀವ ಕೋಟಿಗೆ ಉಸಿರಾಗಿಹಳು
ಬೇಸರವೇತಕೋ ಮನವೇ

ರೆಂಬೆಕೊಂಬೆಗಳಲ್ಲಿ ಹಸಿರು ಎಲೆ
ಬಣ್ಣ ಚಿತ್ತಾರ ನಾದ ಇಂಚರದಲಿ
ಈಶನು ಬೇಸರವೇತಕೋ ಮನವೇ

ಸುಯ್‌ಗುಟ್ಟುವ ತಂಗಾಳಿ ಧರೆ ಆಗಸ
ಕಲ್ಲು ಮಣ್ಣು ಬಂಡೆ ದಡದದಲ್ಲಿಹನು
ಬೇಸರವೇತಕೋ ಮನವೇ

ಧರ್ಮ ಕರ್ಮ ಮರ್ಮ ಭೇದಗಳಲ್ಲಿ
ಸುಳ್ಳು ಮೋಸ ಕಪಟ ವಂಚನೆ ಮೋಹದಲ್ಲಿಹನೊ
ಎಚ್ಚರ! ಬೇಸರವೇತಕೋ ಮನವೇ

ನ್ಯಾಯ ಅನ್ಯಾಯಗಳ ಬೆಲೆಯ ಕಟ್ಟಿ ಹಿಡಿದು
ನೋಡುವಾತನು ಜನ್ಮ ಚಕ್ರದಾತ ಮುಕ್ಕಣನೂ
ಬೇಸರವೇತಕೋ ಮನವೇ

ವೇಷಭೂಷಣ ಜಂಗಮ ಸಂಗಮ ಉಂಬಲಿಂಗ
ಮಹೇಂದ್ರನೂ ಮಸಣವಾಸಿ ರುದ್ರನಿವನು
ಬೇಸರವೇತಕೋ ಮನವೇ

ದಾನ ಮಾನಿಯೂ ಅನ್ನದಾತ ಯೋಗಿಯು
ಭಾಗಿಯಾಗಿ ಮೌನದಲ್ಲಿ ಅವನು
ಬೇಸರವೇತಕೋ ಮನವೇ

ಶಿಷ್ಟನಾಗಿ ವಿಶಿಷ್ಟ ಜ್ಞಾನಿಯಾಗೋ
ಬೇಸರವೆಂದರೆ ಅರ್ಥವಿಲ್ಲ ಕಾಯಕ
ಸಿದ್ದಿ ಮಾಯಕ ಭವಭಾವ ಸಿದ್ದ ನೀನು
ಸರ್ವಾಂತರ್ಯಾಮಿ ಅವನ ಕಾಣಬೇಕು ಮನುಜ

ಬೇಸರವಿಲ್ಲದ ನೇಸರ ತಂಪಲ್ಲಿ
ವಿಹರಿಸು ಚೈತನ್ಯ ತುಂಬಿ
ನೇಸರನ ಗೆಲುವಿನ ಹಾದಿಯಲಿ
ನಡೆಯಬೇಕು ಮನುಜ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...