Home / ಕವನ / ಕವಿತೆ / ಬೇಸರವೇತಕೋ ಮನವೇ

ಬೇಸರವೇತಕೋ ಮನವೇ

ನೇಸರದಾ ತಂಪಲ್ಲಿ ಈಶನಿಹನೋ
ಬೇಸರವೇತಕೋ ಮನವೇ

ಈಶ ಮಹೇಶ ಪ್ರಭು ಮಲ್ಲೇಶ
ಈಶ ಲಿಂಗೇಶ ಸರ್ವೇಶನವನು
ಬೇಸರವೇತಕೋ ಮನವೇ

ಸತಿ ಶಕ್ತಿಯು ಸಸ್ಯ ಶ್ಯಾಮಲೆ
ಜೀವ ಕೋಟಿಗೆ ಉಸಿರಾಗಿಹಳು
ಬೇಸರವೇತಕೋ ಮನವೇ

ರೆಂಬೆಕೊಂಬೆಗಳಲ್ಲಿ ಹಸಿರು ಎಲೆ
ಬಣ್ಣ ಚಿತ್ತಾರ ನಾದ ಇಂಚರದಲಿ
ಈಶನು ಬೇಸರವೇತಕೋ ಮನವೇ

ಸುಯ್‌ಗುಟ್ಟುವ ತಂಗಾಳಿ ಧರೆ ಆಗಸ
ಕಲ್ಲು ಮಣ್ಣು ಬಂಡೆ ದಡದದಲ್ಲಿಹನು
ಬೇಸರವೇತಕೋ ಮನವೇ

ಧರ್ಮ ಕರ್ಮ ಮರ್ಮ ಭೇದಗಳಲ್ಲಿ
ಸುಳ್ಳು ಮೋಸ ಕಪಟ ವಂಚನೆ ಮೋಹದಲ್ಲಿಹನೊ
ಎಚ್ಚರ! ಬೇಸರವೇತಕೋ ಮನವೇ

ನ್ಯಾಯ ಅನ್ಯಾಯಗಳ ಬೆಲೆಯ ಕಟ್ಟಿ ಹಿಡಿದು
ನೋಡುವಾತನು ಜನ್ಮ ಚಕ್ರದಾತ ಮುಕ್ಕಣನೂ
ಬೇಸರವೇತಕೋ ಮನವೇ

ವೇಷಭೂಷಣ ಜಂಗಮ ಸಂಗಮ ಉಂಬಲಿಂಗ
ಮಹೇಂದ್ರನೂ ಮಸಣವಾಸಿ ರುದ್ರನಿವನು
ಬೇಸರವೇತಕೋ ಮನವೇ

ದಾನ ಮಾನಿಯೂ ಅನ್ನದಾತ ಯೋಗಿಯು
ಭಾಗಿಯಾಗಿ ಮೌನದಲ್ಲಿ ಅವನು
ಬೇಸರವೇತಕೋ ಮನವೇ

ಶಿಷ್ಟನಾಗಿ ವಿಶಿಷ್ಟ ಜ್ಞಾನಿಯಾಗೋ
ಬೇಸರವೆಂದರೆ ಅರ್ಥವಿಲ್ಲ ಕಾಯಕ
ಸಿದ್ದಿ ಮಾಯಕ ಭವಭಾವ ಸಿದ್ದ ನೀನು
ಸರ್ವಾಂತರ್ಯಾಮಿ ಅವನ ಕಾಣಬೇಕು ಮನುಜ

ಬೇಸರವಿಲ್ಲದ ನೇಸರ ತಂಪಲ್ಲಿ
ವಿಹರಿಸು ಚೈತನ್ಯ ತುಂಬಿ
ನೇಸರನ ಗೆಲುವಿನ ಹಾದಿಯಲಿ
ನಡೆಯಬೇಕು ಮನುಜ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...