ಬೇಸರವೇತಕೋ ಮನವೇ

ನೇಸರದಾ ತಂಪಲ್ಲಿ ಈಶನಿಹನೋ
ಬೇಸರವೇತಕೋ ಮನವೇ

ಈಶ ಮಹೇಶ ಪ್ರಭು ಮಲ್ಲೇಶ
ಈಶ ಲಿಂಗೇಶ ಸರ್ವೇಶನವನು
ಬೇಸರವೇತಕೋ ಮನವೇ

ಸತಿ ಶಕ್ತಿಯು ಸಸ್ಯ ಶ್ಯಾಮಲೆ
ಜೀವ ಕೋಟಿಗೆ ಉಸಿರಾಗಿಹಳು
ಬೇಸರವೇತಕೋ ಮನವೇ

ರೆಂಬೆಕೊಂಬೆಗಳಲ್ಲಿ ಹಸಿರು ಎಲೆ
ಬಣ್ಣ ಚಿತ್ತಾರ ನಾದ ಇಂಚರದಲಿ
ಈಶನು ಬೇಸರವೇತಕೋ ಮನವೇ

ಸುಯ್‌ಗುಟ್ಟುವ ತಂಗಾಳಿ ಧರೆ ಆಗಸ
ಕಲ್ಲು ಮಣ್ಣು ಬಂಡೆ ದಡದದಲ್ಲಿಹನು
ಬೇಸರವೇತಕೋ ಮನವೇ

ಧರ್ಮ ಕರ್ಮ ಮರ್ಮ ಭೇದಗಳಲ್ಲಿ
ಸುಳ್ಳು ಮೋಸ ಕಪಟ ವಂಚನೆ ಮೋಹದಲ್ಲಿಹನೊ
ಎಚ್ಚರ! ಬೇಸರವೇತಕೋ ಮನವೇ

ನ್ಯಾಯ ಅನ್ಯಾಯಗಳ ಬೆಲೆಯ ಕಟ್ಟಿ ಹಿಡಿದು
ನೋಡುವಾತನು ಜನ್ಮ ಚಕ್ರದಾತ ಮುಕ್ಕಣನೂ
ಬೇಸರವೇತಕೋ ಮನವೇ

ವೇಷಭೂಷಣ ಜಂಗಮ ಸಂಗಮ ಉಂಬಲಿಂಗ
ಮಹೇಂದ್ರನೂ ಮಸಣವಾಸಿ ರುದ್ರನಿವನು
ಬೇಸರವೇತಕೋ ಮನವೇ

ದಾನ ಮಾನಿಯೂ ಅನ್ನದಾತ ಯೋಗಿಯು
ಭಾಗಿಯಾಗಿ ಮೌನದಲ್ಲಿ ಅವನು
ಬೇಸರವೇತಕೋ ಮನವೇ

ಶಿಷ್ಟನಾಗಿ ವಿಶಿಷ್ಟ ಜ್ಞಾನಿಯಾಗೋ
ಬೇಸರವೆಂದರೆ ಅರ್ಥವಿಲ್ಲ ಕಾಯಕ
ಸಿದ್ದಿ ಮಾಯಕ ಭವಭಾವ ಸಿದ್ದ ನೀನು
ಸರ್ವಾಂತರ್ಯಾಮಿ ಅವನ ಕಾಣಬೇಕು ಮನುಜ

ಬೇಸರವಿಲ್ಲದ ನೇಸರ ತಂಪಲ್ಲಿ
ವಿಹರಿಸು ಚೈತನ್ಯ ತುಂಬಿ
ನೇಸರನ ಗೆಲುವಿನ ಹಾದಿಯಲಿ
ನಡೆಯಬೇಕು ಮನುಜ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆತ್ಮ ದರ್ಪಣ
Next post ನೀ ನಡೆವ ದಾರಿ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…