ಪ್ರೀತಿ ಎಂಬ ಹೂದೋಟದಲ್ಲಿ

ಪ್ರೀತಿ ಎಂಬ ಹೂದೋಟದಲ್ಲಿ
ನನ್ನ ಭಾವನೆಗಳ ಎಳೆ‍ಎಳೆಯಲ್ಲಿ
ಬಾನ ರವಿಕಿರಣ ಚೆಲ್ಲಿದ ಬೆಳಕಿನಲ್ಲಿ
ನನ್ನ ಹೂವುಗಳು ಅರಳಿದವು

ಧನ್ಯವಾದ ಅವನಿಗೆ ಅವನು
ನೀಡಿದ ಚೈತನ್ಯಕೆ
ನಮಿಸುವೆನು ಸದಾ ಅವನ ದಿವ್ಯ
ಚರಣಕೆ ಅವನ ಕೃಪೆಯು
ಇರಲಿ ನಮ್ಮ ಬಾಳಿಗೆ

ರವಿಯು ಮರೆಯಾಗಿ ಚಂದಿರ
ಬರಲು ನನ್ನ ಹೂಗಳು ಮಂದಹಾಸ
ಬೀರಲು ತಣಿವುದೆನ್ನ ಮನವು
ಜೋಗುಳ ಹಾಡಿಗೆ ಕಂದ ಕಿಲಕಿಲನೆ ನಗಲು
ಧನ್ಯವಾದ ಅವನಿತೆ ಅವನು ನೀಡಿದ ಅನುಬಂಧಕೆ

ಜೀವ ಜೀವ ಬೆರೆವ ಭಾವಕೆ
ಅವನ ಕೃಪೆಯು ಇರಲಿ ಸದಾ
ನಮ್ಮ ಬದುಕಿಗೆ ನಮಿಸುವೆನು
ಅವನ ದಿವ್ಯ ಚರಣಕೆ

ಜಗವನು ಬೆಳಗುವ ರವಿ
ಚಂದಿರ ತಾರಾ ಬಾನು
ಸೃಷ್ಟಿಸಿದ ಪರಂಜ್ಯೋತಿಗೆ
ನಮಿಸುವೆನು ಸದಾ ಅವನ
ದಿವ್ಯ ಚರಣಕೆ

ಪ್ರಕೃತಿ ಪುರುಷರಿಹರು
ವಿಶ್ವ ಚೈತನ್ಯಕೆ ಜೀವ
ಚಕ್ರವಿಹುದು ಯುಗ ಯುಗಕೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರಿವರ್‍ತನೆ
Next post ಶ್ರಾವಣ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ತಿಮ್ಮರಾಯಪ್ಪನ ಬುದ್ಧಿವಾದ

    ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…

  • ತಿಮ್ಮರಯಪ್ಪನ ಕಥೆ

    ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…