ಭವ್ಯ ಭಾರತ ಭೂಮಿ

ಭವ್ಯ ಭಾರತ ಭೂಮಿ ನಮ್ಮದು
ನವ್ಯ ಭಾರತ ಭೂಮಿ ನಮ್ಮದು
ಶಾಂತಿ ಸಹನೆ ನೀತಿ ನೇಮಗಳ
ಭಾವೈಕ್ಯತೆಯ ಗೂಡು ನಮ್ಮದು

ಜನನಿ ಜನುಮ ಭೂಮಿ ಸ್ವರ್‍ಗ
ತಾಣ ಮುಗಿಲ ಕಾನನದೊಳಗಣ
ಸಮೃದ್ಧಿ ಚೆಂದ ಗಂಧ ಮೆರೆದ
ಸಂಪದ್ಭರಿತ ನಾಡು ನಮ್ಮದು

ಕನಕ ವೃಷ್ಟಿವನಿತ ಭಾವ
ನಿತ್ಯ ವರ್‍ಣ ಚೇತನ ಕಾಮನ
ಸತ್ಯ ಧರ್‍ಮಕರ್‍ಮ ಮರ್‍ಮ
ಬೆಸೆದ ಭೂಮಿ ನಮ್ಮದು

ಋತು ಚಕ್ರಧಾರೆಯಲಿ
ಕೀರ್ತಿ ಶಿಖರಕೇರಿ ಉದಯ ಕಿರಣ
ಸುದಯ ಅಭಿಮಾನದಾನಂದ ಮೆರೆವ
ಪುಣ್ಯ ಭೂಮಿ ನಮ್ಮದು

ಸಂತ ಸಾಧು ವೀರಗಾಥ
ತ್ಯಾಗ ರೂಪ ದೀಪವಂದನ
ಅಮರಗಾನ ವಿರಾಟ ಮನನ
ಜನ್ಮ ಕರ್‍ಮಭೂಮಿ ನಮ್ಮದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆತ್ಮ ದೇವಾಲಯ
Next post ಹಳೇ ಮಂದಿ

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…