Home / ಕವನ / ಕವಿತೆ / ತಾರಾ

ತಾರಾ

‘ಭವತಿ ಭಿಕ್ಷಾಂದೇಹಿ’

ಭಿಕ್ಷಾಪಾತ್ರೆ ಹಿಡಿದು
ಮನೆ ಮನೆಯಿಂದಲೂ
ಬೇಡಿ ತಂದಿದ್ದು
ಕರಗದ ದಾರುಣ ಸಂಕಟವನ್ನೇ

ಅಗಿದು ಜಗಿದರೂ ತೀರದ ನೋವು
ಸುಮ್ಮನೇ ಪಚನವಾದೀತೇ?
ಬೊಗಸೆಯಲಿ ಆಪೋಷಿಸಿ
ನೀಗಿಕೊಂಡ ಬೋಧಿಸತ್ವನೇನೋ
ಬುದ್ಧನಾಗಿಹೋದ!

ಆದರೆ ಒಳಗಿಳಿದದ್ದು ಸುಮ್ಮನುಳಿದೀತೆ?
ಹೃದಯ ತುಂಬಿ ಕುಡಿದದ್ದು
ಕರುಳೇ ಬಿರಿದು
ನೊಂದ ನೋವೇ ಕಾರುಣ್ಯರಸವಾಗಿ
ಕಣ್ಣು ತುಂಬಿ
ತಣ್ಣಗೆ ಹರಿದು ನೀರಾಗಿ
ಕಣ್ಣೀರ ಸರೋವರವೇ ಮಡುಗಟ್ಟಿತು.

ಸುಡು ಕಾವಿಗೂ ಆವಿಯಾಗದೇ
ಉಳಿದ ದ್ರವರೂಪಿ ನೋವೆಲ್ಲ
ಸೋಸಿ ಸೋಸಿ ತಿಳಿಯಾದ
ಸ್ವಚ್ಛ ನೀರಿನೊಳಗೆ
ಅಚ್ಛ ಬಿಳಿ ಕಮಲ ಬಿರಿದು
ಅದರೊಳಗೆ
ಅರಳಿಕೊಂಡವಳು
ಆ ಬುದ್ದನದೇ ಹೆಣ್ಣುರೂಪ
ತಾರಾ
*****
[ಟಿಬೇಟಿಯನ್ ಬೌದ್ಧಧರ್ಮದ ಪರಿಕಲ್ಪನೆಯಲ್ಲಿ- ನೋವು ನುಂಗಿದ ಬುದ್ಧನ ಸಂಕಟ ಕಣ್ಣೀರಾಗಿ ಹರಿದು ಉಂಟಾದ ಸರೋವರದಲ್ಲಿ ಅರಳಿದ ಕಮಲದಿಂದ ಬುದ್ಧನ ಸ್ತ್ರೀರೂಪವೊಂದು ತಾರಾ ಬುದ್ಧಳಾಗಿ ಹೊರಹೊಮ್ಮಿದ ಕಥೆಯಿದೆ.]

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...