Home / ಕವನ / ಕವಿತೆ / ಸಹಜ ಧ್ಯಾನ

ಸಹಜ ಧ್ಯಾನ

ಹೂಕೋಸಿನ ರೂಪ ಬಣ್ಣದಲಿ
ಮನ ಲೀನ, ಮಲಿನ.
ಹೆಚ್ಚುತ್ತಾ ಮೆಚ್ಚುತ್ತಾ ಅದರ
ಬುಡದಲ್ಲೇ ಹರಿವ
ಪಿತಿಪಿತಿ ಹುಳು
ಕಂಡರೂ ಕಾಣದಂತೆ
ಚೆಲುವಿನಾರಾಧನಾ ಧ್ಯಾನ

ಪೀಠಸ್ಥ ಆದೇಶಕ್ಕೆ ಮಹಾಮೌನ.

ದಂಟು ಬೇಳೆ ಬೇಯಿಸಿ ಬಸಿದು
ಮೆಣಸು ಮಸಾಲೆ ಖಾರ
ಹದ ಬೆರೆಸಿ ಕುದಿಸಿ ಒಗ್ಗರಿಸಿ
ಬಸ್ಸಾರಿನ ರಸಗಂಧವ
ಆಘ್ರಾಣಿಸಿ ಹೀರಿ
ಕರುಳಿನಾಳದ ಬಾಯ್ಚಪ್ಪರಿಕೆ
ಮಹಾರಸದುನ್ಮಾದ ಧ್ಯಾನ
ಅಮಲಿನಲಿ ಮೈಮರೆವು

ಹೊರಳು ದಾರಿಯಲಿ ತಿಳಿವು.

ಬೆಳ್ಳುಳ್ಳಿ ಒಗ್ಗರಣೆ ಘಮ ಮೂಗಿಗಡರಿ
ಆ ಗಂಧದ ಬೆನ್ನು ಹಿಡಿದು
ಗಾಳಿಯಲೆಗಳ ಮೇಲೆ ಸವಾರಿ
ಬೀಸಿ ಕೆಡವುತ್ತದೆ ವಾಸನಾ ಧ್ಯಾನ
ತಪ್ಪುತ್ತದೆ ಪ್ರಭುತ್ವ ನಿರ್ದೇಶಿತ ದಾರಿ

ನಡೆದ ದಾರಿಯೇ ಸರಿ.

ಸಬ್ಬಸಿಗೆ ಸೊಪ್ಪಿನ
ವಿನ್ಯಾಸಕ್ಕೆ ಮೃದು ಸ್ಪರ್ಶಕ್ಕೆ
ಅದೆಂಥಾ ನವುರು ಮುದ.
ಮೃದುವಾಗಿ ಮುಟ್ಟುತ್ತಾ
ಆವರಿಸುವ ಆವಾಹಿಸುವ
ಹಿತವಾದ ಮಿಡಿತ
ಕಾಡುತ್ತದೆ ಅದೇ
ಸ್ಪರ್ಶಸುಖದ ಧ್ಯಾನ

ಅನುಭವಕ್ಕೇ ಬದ್ಧ ಮನ.

ಹೆಚ್ಚಲು ಕೈಗೆತ್ತಿಕೊಂಡ
ಈರುಳ್ಳಿಯ ಮೂಲ ಕಾಡಿ
ಪಕಳೆ ಪಕಳೆಗಳ ಬಿಡಿಸುತ್ತಾ ಹೋದಂತೆ
ಅದರಲ್ಲೇ ತಲ್ಲೀನ
ಆ ಕೌತುಕಕ್ಕೇ ಸೋತು
ಆವರಿಸುತ್ತದೆ ವಿಸ್ಮಿತ ಧ್ಯಾನ

ಅಳಿಸಿಹೋಗುತ್ತದೆ ಯಾರೋ ಬರೆದಿಟ್ಟ
ಅಲೌಕಿಕ ದಿವ್ಯ ಪುರಾಣ.

ಈ ನಿತ್ಯ ಪ್ರೀತಿಯ
ರೂಪ ರಸ ಗಂಧ ಸ್ಪರ್ಶ ವಿಸ್ಮಯಗಳ
ಮಾನುಷ ಸಹಜ ಧ್ಯಾನದಲಿ
ಅನುಕ್ಷಣದ ಎಚ್ಚರ
ಮತ್ತೆ ಮತ್ತ ಮೈಮರೆವಿನ
ಹುಚ್ಚು ಮೋಹದ ಜೂಟಾಟ.
ನಿಲುಕಲಾರದ ಎತ್ತರದಲೇ ಇರಲಿ ಬಿಡು
ಅವರಿಟ್ಟ ಸಂತ ಪೀಠ.

ನನಗಾಗಿ
ಈ ನೆಲದಲ್ಲೇ ಹೀಗೇ
ಈ ಕ್ಷಣ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...