Home / ಕವನ / ಕವಿತೆ / ಸಹಜ ಧ್ಯಾನ

ಸಹಜ ಧ್ಯಾನ

ಹೂಕೋಸಿನ ರೂಪ ಬಣ್ಣದಲಿ
ಮನ ಲೀನ, ಮಲಿನ.
ಹೆಚ್ಚುತ್ತಾ ಮೆಚ್ಚುತ್ತಾ ಅದರ
ಬುಡದಲ್ಲೇ ಹರಿವ
ಪಿತಿಪಿತಿ ಹುಳು
ಕಂಡರೂ ಕಾಣದಂತೆ
ಚೆಲುವಿನಾರಾಧನಾ ಧ್ಯಾನ

ಪೀಠಸ್ಥ ಆದೇಶಕ್ಕೆ ಮಹಾಮೌನ.

ದಂಟು ಬೇಳೆ ಬೇಯಿಸಿ ಬಸಿದು
ಮೆಣಸು ಮಸಾಲೆ ಖಾರ
ಹದ ಬೆರೆಸಿ ಕುದಿಸಿ ಒಗ್ಗರಿಸಿ
ಬಸ್ಸಾರಿನ ರಸಗಂಧವ
ಆಘ್ರಾಣಿಸಿ ಹೀರಿ
ಕರುಳಿನಾಳದ ಬಾಯ್ಚಪ್ಪರಿಕೆ
ಮಹಾರಸದುನ್ಮಾದ ಧ್ಯಾನ
ಅಮಲಿನಲಿ ಮೈಮರೆವು

ಹೊರಳು ದಾರಿಯಲಿ ತಿಳಿವು.

ಬೆಳ್ಳುಳ್ಳಿ ಒಗ್ಗರಣೆ ಘಮ ಮೂಗಿಗಡರಿ
ಆ ಗಂಧದ ಬೆನ್ನು ಹಿಡಿದು
ಗಾಳಿಯಲೆಗಳ ಮೇಲೆ ಸವಾರಿ
ಬೀಸಿ ಕೆಡವುತ್ತದೆ ವಾಸನಾ ಧ್ಯಾನ
ತಪ್ಪುತ್ತದೆ ಪ್ರಭುತ್ವ ನಿರ್ದೇಶಿತ ದಾರಿ

ನಡೆದ ದಾರಿಯೇ ಸರಿ.

ಸಬ್ಬಸಿಗೆ ಸೊಪ್ಪಿನ
ವಿನ್ಯಾಸಕ್ಕೆ ಮೃದು ಸ್ಪರ್ಶಕ್ಕೆ
ಅದೆಂಥಾ ನವುರು ಮುದ.
ಮೃದುವಾಗಿ ಮುಟ್ಟುತ್ತಾ
ಆವರಿಸುವ ಆವಾಹಿಸುವ
ಹಿತವಾದ ಮಿಡಿತ
ಕಾಡುತ್ತದೆ ಅದೇ
ಸ್ಪರ್ಶಸುಖದ ಧ್ಯಾನ

ಅನುಭವಕ್ಕೇ ಬದ್ಧ ಮನ.

ಹೆಚ್ಚಲು ಕೈಗೆತ್ತಿಕೊಂಡ
ಈರುಳ್ಳಿಯ ಮೂಲ ಕಾಡಿ
ಪಕಳೆ ಪಕಳೆಗಳ ಬಿಡಿಸುತ್ತಾ ಹೋದಂತೆ
ಅದರಲ್ಲೇ ತಲ್ಲೀನ
ಆ ಕೌತುಕಕ್ಕೇ ಸೋತು
ಆವರಿಸುತ್ತದೆ ವಿಸ್ಮಿತ ಧ್ಯಾನ

ಅಳಿಸಿಹೋಗುತ್ತದೆ ಯಾರೋ ಬರೆದಿಟ್ಟ
ಅಲೌಕಿಕ ದಿವ್ಯ ಪುರಾಣ.

ಈ ನಿತ್ಯ ಪ್ರೀತಿಯ
ರೂಪ ರಸ ಗಂಧ ಸ್ಪರ್ಶ ವಿಸ್ಮಯಗಳ
ಮಾನುಷ ಸಹಜ ಧ್ಯಾನದಲಿ
ಅನುಕ್ಷಣದ ಎಚ್ಚರ
ಮತ್ತೆ ಮತ್ತ ಮೈಮರೆವಿನ
ಹುಚ್ಚು ಮೋಹದ ಜೂಟಾಟ.
ನಿಲುಕಲಾರದ ಎತ್ತರದಲೇ ಇರಲಿ ಬಿಡು
ಅವರಿಟ್ಟ ಸಂತ ಪೀಠ.

ನನಗಾಗಿ
ಈ ನೆಲದಲ್ಲೇ ಹೀಗೇ
ಈ ಕ್ಷಣ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...