ಸಹಜ ಧ್ಯಾನ

ಹೂಕೋಸಿನ ರೂಪ ಬಣ್ಣದಲಿ
ಮನ ಲೀನ, ಮಲಿನ.
ಹೆಚ್ಚುತ್ತಾ ಮೆಚ್ಚುತ್ತಾ ಅದರ
ಬುಡದಲ್ಲೇ ಹರಿವ
ಪಿತಿಪಿತಿ ಹುಳು
ಕಂಡರೂ ಕಾಣದಂತೆ
ಚೆಲುವಿನಾರಾಧನಾ ಧ್ಯಾನ

ಪೀಠಸ್ಥ ಆದೇಶಕ್ಕೆ ಮಹಾಮೌನ.

ದಂಟು ಬೇಳೆ ಬೇಯಿಸಿ ಬಸಿದು
ಮೆಣಸು ಮಸಾಲೆ ಖಾರ
ಹದ ಬೆರೆಸಿ ಕುದಿಸಿ ಒಗ್ಗರಿಸಿ
ಬಸ್ಸಾರಿನ ರಸಗಂಧವ
ಆಘ್ರಾಣಿಸಿ ಹೀರಿ
ಕರುಳಿನಾಳದ ಬಾಯ್ಚಪ್ಪರಿಕೆ
ಮಹಾರಸದುನ್ಮಾದ ಧ್ಯಾನ
ಅಮಲಿನಲಿ ಮೈಮರೆವು

ಹೊರಳು ದಾರಿಯಲಿ ತಿಳಿವು.

ಬೆಳ್ಳುಳ್ಳಿ ಒಗ್ಗರಣೆ ಘಮ ಮೂಗಿಗಡರಿ
ಆ ಗಂಧದ ಬೆನ್ನು ಹಿಡಿದು
ಗಾಳಿಯಲೆಗಳ ಮೇಲೆ ಸವಾರಿ
ಬೀಸಿ ಕೆಡವುತ್ತದೆ ವಾಸನಾ ಧ್ಯಾನ
ತಪ್ಪುತ್ತದೆ ಪ್ರಭುತ್ವ ನಿರ್ದೇಶಿತ ದಾರಿ

ನಡೆದ ದಾರಿಯೇ ಸರಿ.

ಸಬ್ಬಸಿಗೆ ಸೊಪ್ಪಿನ
ವಿನ್ಯಾಸಕ್ಕೆ ಮೃದು ಸ್ಪರ್ಶಕ್ಕೆ
ಅದೆಂಥಾ ನವುರು ಮುದ.
ಮೃದುವಾಗಿ ಮುಟ್ಟುತ್ತಾ
ಆವರಿಸುವ ಆವಾಹಿಸುವ
ಹಿತವಾದ ಮಿಡಿತ
ಕಾಡುತ್ತದೆ ಅದೇ
ಸ್ಪರ್ಶಸುಖದ ಧ್ಯಾನ

ಅನುಭವಕ್ಕೇ ಬದ್ಧ ಮನ.

ಹೆಚ್ಚಲು ಕೈಗೆತ್ತಿಕೊಂಡ
ಈರುಳ್ಳಿಯ ಮೂಲ ಕಾಡಿ
ಪಕಳೆ ಪಕಳೆಗಳ ಬಿಡಿಸುತ್ತಾ ಹೋದಂತೆ
ಅದರಲ್ಲೇ ತಲ್ಲೀನ
ಆ ಕೌತುಕಕ್ಕೇ ಸೋತು
ಆವರಿಸುತ್ತದೆ ವಿಸ್ಮಿತ ಧ್ಯಾನ

ಅಳಿಸಿಹೋಗುತ್ತದೆ ಯಾರೋ ಬರೆದಿಟ್ಟ
ಅಲೌಕಿಕ ದಿವ್ಯ ಪುರಾಣ.

ಈ ನಿತ್ಯ ಪ್ರೀತಿಯ
ರೂಪ ರಸ ಗಂಧ ಸ್ಪರ್ಶ ವಿಸ್ಮಯಗಳ
ಮಾನುಷ ಸಹಜ ಧ್ಯಾನದಲಿ
ಅನುಕ್ಷಣದ ಎಚ್ಚರ
ಮತ್ತೆ ಮತ್ತ ಮೈಮರೆವಿನ
ಹುಚ್ಚು ಮೋಹದ ಜೂಟಾಟ.
ನಿಲುಕಲಾರದ ಎತ್ತರದಲೇ ಇರಲಿ ಬಿಡು
ಅವರಿಟ್ಟ ಸಂತ ಪೀಠ.

ನನಗಾಗಿ
ಈ ನೆಲದಲ್ಲೇ ಹೀಗೇ
ಈ ಕ್ಷಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಳವಳಿಗಳು ಮತ್ತು ಸೃಜನಶೀಲ ಸ್ವಾತಂತ್ರ್ಯ
Next post ಭಕ್ತ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…