ಕತ್ತಲೆ ಎಷ್ಟಿದ್ದರೆ ಏನು?

ಕತ್ತಲೆ ಎಷ್ಟಿದ್ದರೆ ಏನು?
ಹಚ್ಚುವೆನು ದೀಪ
ಕಿಟಕಿ ಬಾಗಿಲು ಮುಚ್ಚಿದರೇನು
ಹರಡದೇನು ಧೂಪ //ಪ//

ಮುಳ್ಳುಗಳೆಷ್ಟಿದ್ದರೆ ಏನು
ಅರಳದೇನು ಹೂವು?
ನೋವುಗಳೆಷ್ಟಿದ್ದರೆ ಏನು
ಅರಸಬೇಕೆ ಸಾವು?

ಗದ್ದಲ ಎಷ್ಟಿದ್ದರೆ ಏನು
ಸಂತೆ ಸಾಗದೇನು?
ತಂದ ಭಾರವ ಕಳೆಯದೆ ಇಲ್ಲಿ
ಬಂಡಿ ಹತ್ತಲೇನು?

ಹಲ್ಲಿನ ಪಹರೆ ಇದ್ದರೆ ಏನು
ನುಡಿಯದೆ ನಾಲಿಗೆಯು?
ಸಿಟ್ಟಿಗೆದ್ದರೆ ಹಲ್ಲಿನ ಹಲ್ಲನು
ಮುರಿಸದೆ ಈ ನಾಲಿಗೆಯು?

ಕಿಚ್ಚನು ಯಾರು ಹಾಕಿದರೇನು
ಸಂಕ್ರಾಂತಿ ಅದು ಇನ್ನು!
ಒಳಗಿನ ಕಿಚ್ಚು ಅನ್ಯರ ಸುಡದು
ತಿಳಿಯಲು ತಡವೇನು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಂಕಿ ಹೂವು
Next post ದಿಗಿಲು

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

cheap jordans|wholesale air max|wholesale jordans|wholesale jewelry|wholesale jerseys