ಭಾರತ ದೇಶದ ತೊಂಡು ದನಗಳಿಗೆ

ಭಾರತ ದೇಶದ ತೊಂಡು ದನಗಳಿಗೆ
ಕರ್ನಾಟಕವೇ ಪ್ರೀತಿಯು
ಇಲ್ಲಿಯ ಹುಲ್ಲು ನೀರು ಕಂಡರೆ
ಎಲ್ಲಿಲ್ಲದ ಸಂಪ್ರೀತಿಯು
ಆದರೆ ಏಕೊ ಕನ್ನಡ ಎಂದರೆ
ಅವುಗಳಿಗಿನ್ನು ಅಪಥ್ಯವು
ಇಂತಹ ರೋಗಕೆ ಮದ್ದು ಯಾವುದು?
ತಿಳಿಯಬೇಕು ಇಂದು ನಾವು

ಕರ್ನಾಟಕಕೆ ಗೋಡೆಗಳಿಲ್ಲ
ಇರುವುದು ಕೂಡ ಬೇಡ
ಇರುವ ಗೋಡೆಗಳೆ ಬಿದ್ದರೆ ಸಾಕು
ಹೊಸ ಗೋಡೆಗಳು ಬೇಡ
ಇಂತಹ ಬಯಲಲಿ ಮೇಯುತ್ತಲಿವೆ
ಮೇಯಲಿ, ಅವಕಿವೆ ಹೊಟ್ಟೆ
ಆದರೆ ತಲೆಗೆ ಮಿದುಳು ಬೇಡವೆ?
ಬೇಡವೆ ಕನ್ನಡ ಅವಕೆ!

ಕರ್ನಾಟಕದಲೆ ಹುಟ್ಟಿ ಬೆಳೆದಿವೆ
ಇಲ್ಲಿಯ ಅನೇಕ ರಾಸುಗಳು
ಗಾಳಿಯಷ್ಟೆ ಕನ್ನಡವನು ಉಂಡಿವೆ
ಇವುಗಳ ಶ್ವಾಸ ಕೋಶಗಳು
ಆದರೂ ಏಕೊ ಕನ್ನಡ ಎಂಬುದು
ಇವುಗಳಿಗೂ ಸಹ ಅಪರಿಚಿತ
ಇವುಗಳ ರೋಗಕ್ಕಿನ್ನೊಂದು ಮದ್ದು
ನೀಡಬೇಕಿದೆ ಉಚಿತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಹರಿ
Next post ಸೊಲ್ಲಾಪುರದ ಸಿದ್ಧರಾಮೇಶ್ವರ ಸ್ತೋತ್ರ

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…