ಬೂದಿಯಲೆದ್ದವರು

ತಳದಲ್ಲಿದ್ದವರು; ನಾವು ಬೂದಿಯಲೆದ್ದವರು
ಕತ್ತಲೆ ಚರಿತೆಯ ಬೆತ್ತಲೆ ಮಾಡುವ
ಕನಸನು ಹೊತ್ತವರು | ನಾವು
ಕನಸನು ಹೊತ್ತವರು ||

ನೋವನು ಉಂಡವರು, ಉಂಡು ಮೌನವ ಹೊದ್ದವರು
ಅಕ್ಷರ ದೂರದ ಕತ್ತಲೆ ಗವಿಯಲಿ
ಬದುಕನು ಕಳೆದವರು | ಬೆಳಕ
ಕಾಣದೆ ಹೋದವರು

ಬದುಕನು ಕೆತ್ತವರು; ಬೆನ್ನಲಿ ಮಹಲನು ಹೊತ್ತವರು
ಮನುಕುಲ ಕತೆಯಲಿ ವೈಭವದಡಿಯಲಿ
ಗೆದ್ದಲು ತಿಂದವರು | ಗುರುತು
ಸಿಗದೇ ಹೋದವರು

ಭೂಮಿಯ ಹೊತ್ತವರು; ಈಗ ಭೂಮಿಯ ಬಿಚ್ಚುವೆವು
ಸಮುದ್ರವಾದವರು; ಈಗ ಸಮುದ್ರ ಸೀಳುವೆವು
ಕೆಂಪು ಸೂರ್‍ಯನ ಉದಯದ ಊರಲಿ
ಕಿರಣಗಳಾಗುವೆವು | ಬೆಳಕಿನ
ರಂಗೋಲಿ ಬರೆಯುವೆವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖಾಲಿ ಗಾದಿಯ ಕೈವಾಡ
Next post ಗುಬ್ಬಕ್ಕ

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…