ಬೂದಿಯಲೆದ್ದವರು

ತಳದಲ್ಲಿದ್ದವರು; ನಾವು ಬೂದಿಯಲೆದ್ದವರು
ಕತ್ತಲೆ ಚರಿತೆಯ ಬೆತ್ತಲೆ ಮಾಡುವ
ಕನಸನು ಹೊತ್ತವರು | ನಾವು
ಕನಸನು ಹೊತ್ತವರು ||

ನೋವನು ಉಂಡವರು, ಉಂಡು ಮೌನವ ಹೊದ್ದವರು
ಅಕ್ಷರ ದೂರದ ಕತ್ತಲೆ ಗವಿಯಲಿ
ಬದುಕನು ಕಳೆದವರು | ಬೆಳಕ
ಕಾಣದೆ ಹೋದವರು

ಬದುಕನು ಕೆತ್ತವರು; ಬೆನ್ನಲಿ ಮಹಲನು ಹೊತ್ತವರು
ಮನುಕುಲ ಕತೆಯಲಿ ವೈಭವದಡಿಯಲಿ
ಗೆದ್ದಲು ತಿಂದವರು | ಗುರುತು
ಸಿಗದೇ ಹೋದವರು

ಭೂಮಿಯ ಹೊತ್ತವರು; ಈಗ ಭೂಮಿಯ ಬಿಚ್ಚುವೆವು
ಸಮುದ್ರವಾದವರು; ಈಗ ಸಮುದ್ರ ಸೀಳುವೆವು
ಕೆಂಪು ಸೂರ್‍ಯನ ಉದಯದ ಊರಲಿ
ಕಿರಣಗಳಾಗುವೆವು | ಬೆಳಕಿನ
ರಂಗೋಲಿ ಬರೆಯುವೆವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖಾಲಿ ಗಾದಿಯ ಕೈವಾಡ
Next post ಗುಬ್ಬಕ್ಕ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…