ಕಟ್ಟುತ್ತಿರುವೆನು ಮಂದಿರವನ್ನು

ಕಟ್ಟುತ್ತಿರುವೆನು ಮಂದಿರವನ್ನು
ಎದೆಯ ಗೂಡಿನಲ್ಲಿ
ರಾಮ ರಹೀಮ ಕ್ರಿಸ್ತ ಅಲ್ಲಮ
ಎಲ್ಲರಿರುವರಲ್ಲಿ

ಆಂಜನೇಯನಿಗೂ ಏಸುಕ್ರಿಸ್ತನಿಗೂ
ಬಹಳ ನ್ಯಾಸ್ತವಿಲ್ಲಿ
ಬುದ್ಧ ನಾನಕ ಮಹಾವೀರರು
ಇವರ ಸ್ನೇಹದಲ್ಲಿ

ರಾಮ ಪವಡಿಸಿಹ ಮಸೀದಿಯಲ್ಲಿ
ಕ್ರಿಸ್ತನಾ ಕೋಣೆಯಲ್ಲಿ
ಇದಕೆ ಹೆಸರುಗಳು ಇಗರ್ಜಿ ಬಸದಿ
ನೂರು ಭಾಷೆಯಲ್ಲಿ

ಇಲ್ಲಿಯ ರಾಮ ನುಡಿವನು ಉರ್‍ದು
ಅಲ್ಲಾ ಸಂಸ್ಕೃತ ಬಲ್ಲ
ಕ್ರಿಸ್ತನಿಗೋ ತೆಲುಗೆಂದರೆ ಪ್ರೀತಿ
ಕನ್ನಡವಿಲ್ಲದೆ ಇಲ್ಲ

ಎಲ್ಲಾ ದೇವರು ಕ್ರಿಕೇಟಾಡುವರು
ಸೋಲು ಗೆಲುವು ಕ್ಷಣಿಕ
ಕಡೆಗೆ ಮಬ್ಬಲಿ ಒಂದೆ ಕ್ಲಬ್ಬಲಿ
ತೋರ್‍ವರೆಲ್ಲ ಪುಳಕ

ಅವನು ಹೇಳುವನು ಕಿರೀಟ ಭಾರ
ಇವನಿಗೊ ಟೋಪಿಯು ಭಾರ
ಎಲ್ಲರು ಹಾರೈಸಿಹರು ಕ್ರಿಸ್ತಗೆ
ಶಿಲುಬೆಯಿಂದ ಪರಿಹಾರ

ಜುಟ್ಟುಗಳಿದ್ದರೆ ಜುಟ್ಟೆಳೆದಾಟ
ಗಡ್ಡಗಳಿದ್ದರೆ ಮುಂಭಾರ
ದೇಹಕೆ ಭಾರ ಆ ಶಿವದಾರ
ಕಡಿಮೆಯಲ್ಲ ಜನಿವಾರ!

ಎಲ್ಲ ಚಾನಲಲಿ ಮತ ಮೌಢ್ಯಗಳು
ವಿಜ್ಞಾನಕೆ ಇದು ಥರವೇ
ಕಡೆಗೆ ನಮ್ಮನೂ ಎಳೆದು ತರುವಿರಿ
ನಿಮಗೆ ಇದು ಭೂಷಣವೇ

ಎದೆಯ ಗೂಡಿನಲಿ ರಾಮ ಅಳುವನು
ಪರಿವಾರದ ಜೊತೆಗೂಡಿ
ತಾಯಿಯ ಗರ್‍ಭವ ದಾಟಿದ ತಪ್ಪಿಗೆ
ಪ್ರಾಣಿಪಕ್ಷಿಗಳ ಕೂಡಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಳತೋಟಿ
Next post ಲ್ಯಾಪ್ ಟಾಪ್

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…