ಕಳೆದು ಹೋದ ದಿನಗಳು

ಕಳೆದು ಹೋದ ದಿನಗಳೆ
ಕನಸಾಗಿ ಕಾಡದಿರಿ
ಉರುಳಿಹೋದ ಹಾಡುಗಳ
ಉರುಳಾಗಿ ಮಾಡದಿರಿ ||

ಕೈ ಬೀಸಿದ ಚಂದ್ರತಾರೆ
ಮಗಿಲಿನಾಚೆ ನಿಲ್ಲಲಿ
ಕವಿ ಮಾಡಿದ ಆ ಕೋಗಿಲೆ
ಕಾವ್ಯದಲ್ಲೆ ನೆಲೆಸಲಿ
ಬದುಕು ನಿತ್ಯ ಶ್ರಾವಣ
ಸುವರ್‍ಣದ ಹೂರಣ
ನೆನಪಾಗಿ ಬಾರದಿರಲಿ
ಚಿತ್ರವಾಗಿ ಕಾಡದಿರಲಿ

ಗಿರಿ ಪರ್‍ವತ ಹೂ ಹಸಿರು
ಹೊಸತು ಬಣ್ಣ ತಳೆಯಲಿ
ನೆಲೆದೊಡಲಿನ ಬಿಸಿಯುಸಿರು
ಕಾವ್ಯಕೆ ಬಸಿರಾಗಲಿ
ನಾಳೆ ಇರಲಿ ನಾಳೆಯಾಗಿ
ಭೂತವಿರಲಿ ನಿನ್ನೆಗೆ
ಬದುಕ ಪಯಣ ಸಾಗುವಲ್ಲಿ
ವರ್‍ತಮಾನ ಹಾಡಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮಭಾಗ್ಯ
Next post ನೋವು

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…