ಮಾತನಾಡಬೇಕು ನಾವು

ಮಾತನಾಡಬೇಕು ನಾವು
ಒಂದು ಘಳಿಗೆ ಕುಳಿತು
ಬಿಟ್ಟು ಎಲ್ಲ ಹಮ್ಮು ಬಿಮ್ಮು
ಹೃದಯ ಬೆಸೆಯಬೇಕು

ದಾರ ಏಕೆ ದೂರ ಬೇಕೆ
ಮಾತನಾಡುವಾಗ
ಬೇಲಿ ಬೇಡ ನೋಟ ಇರಲಿ
ಮನಸು ಕೂಡುವಾಗ

ಹಂಚಿಕೊಂಡ ರಕ್ತವೊಂದೆ
ರಕ್ತ ಹರಿವುದೇಕೆ?
ಹಾಲೂಡಿದ ನೆಲವದೊಂದೆ
ಇಲ್ಲಿ ಕದನವೇಕೆ?

ನನಗೆ ನೀನು ನಿನಗೆ ನಾನು
ಇದು ಅಲ್ಲವೆ ಸತ್ಯ
ಇಂತಿರಲು ಕಲಹವೇಕೆ?
ಕಾಣದವನೆ ಮಿಥ್ಯ

ನಡೆದ ದಾರಿ ಹಾಗಿರಲಿ
ಹೆಜ್ಜೆ ಮುಂದೆ ಇರಲಿ
ಆಕಾಶವು ಅಳದಿರಲಿ
ನೆಲವು ಕುಸಿಯದಿರಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವಿತೆಯ ಸಾಲುಗಳು
Next post ಕುಡಿಯುವ ನೀರು

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…