ಕೋಗಿಲೆ ಕೆಂಪಾಯ್ತು

ಕೋಗಿಲೆ ಕೆಂಪಾಯ್ತು
ಹಾಡು ರಂಗಾಯ್ತು
ತಗ್ಗು ದಿಣ್ಣೆಗಳ ಹಲ ಕಾಲದ ಸೀಮೆ
ಒಡೆದು ಚೂರಾಯ್ತು

ಮೂಡಣದಲಿ ಸೂರ್‍ಯ
ಹೊಸ ಬೆಳಕನು ತಂದ
ಕತ್ತಲುಂಡ ಹಳೆ ಜಗದ ಮಂದಿಗೆ
ಹೊಸ ಜಗವ ತೆರೆದ

ಬೆಳದಿಂಗಳ ಚಂದ್ರ
ಓಕುಳಿಯನು ಎರೆದ
ಭ್ರಷ್ಟವಾದ ನೂರೊಂದು ಬಣ್ಣಕೆ
ಹೊಸ ಭಾಷ್ಯ ಬರೆದ

ಮುಂಗಾರ್‍ಮಳೆ ಧಾರೆ
ಸುರಿಯಿತು ಎಲ್ಲೆಲ್ಲು
ಹನಿಗಾಣದ ಬಿರುಬಿಸಿಲ ಸೀಮೆಗೂ
ತಂದಿತು ಹೊಸ ಸೊಲ್ಲು

ಎಲ್ಲೆಲ್ಲೂ ಚಿಗುರು
ನೆಮ್ಮದಿಯಾ ಉಸಿರು
ಕಂಡ ಕನಸು ನನಸಾಗಿ ಮೂಡಿರೆ
ಎದೆಯೆಲ್ಲಾ ಹಸಿರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೂ
Next post ಚತುರತೆ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys