ಒಲವೇ ನನ್ನೊಲವೇ

ಒಲವೇ ನನ್ನೊಲವೇ
ಕಣ್ಣಲ್ಲಿ ತುಂಬಿರುವೆ
ಸಿಗದೆ ನೀ ತೋಳಲ್ಲಿ
ತನುವ ಕೊಲ್ಲುವೆ |ಪ|

ಇನ್ನು ಏಕೆ ದೂರ ದೂರ
ನೋಡು ಶ್ರಾವಣ
ಹೃದಯ ಈಗ ಬಿರಿಯೆ
ನೀನು ಕಾರಣ |ಅ.ಪ|

ಕನಸು ನೀನು ಕವನ ನೀನು
ಕನವರಿಸೊ ಮನಸು ನಾನು
ನಿನಗಾಗಿ ಈ ಜೀವ
ನೀನಿರಲು ಈ ಬಾಳು ಜೇನು
ನೀನಿರದೆ ಈ ಜಗವು
ರವಿಯಿರದ ಶಶಿಯಿರದ ಬಯಲು ಬಾನು

ಪ್ರೀತಿ ನೀನು ರೀತಿ ನೀನು
ಇನ್ನು ಭೀತಿ ಏನು?
ತುಂಬಿರುವ ಕಡಲಾಗಿ
ಮೊರೆದಿರಲು ಈ ಪ್ರೀತಿ ಜೇನು
ನಿನ್ನ ಹಾಡು ನನ್ನ ನಾಡು
ನಾ ರಾಜ ನೀ ರಾಣಿ ಅಜರಾಮರವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಮಲಾ ಮೇಡಂಗೆ
Next post ಗಂಗೀ ಗೌರೀ ಹಾಡು – ೨

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…