ನನಗೂ ಆಸೆ ಕವಿತೆ ಬರೆಯಲು

ನನಗೂ ಆಸೆ ಕವಿತೆ ಬರೆಯಲು
ಭಾರತಾಂಬೆಯ ಮೇಲೆ
ಸತ್ಯವ ಮುಚ್ಚಿ ಸುಳ್ಳು ಹೇಳುವುದು
ಥರವೆ? ಗೆಳತಿ ಹೇಳೆ

ಭಾರತಾಂಬೆಯ ಒಬ್ಬ ಮಗ
ಇರುವನು ಊರ ಒಳಗೆ
ಇವನಿಗೆ ಸಹಜ ಭಾರತ ಮಹಾನ್
ನಾನು ಯಾರ ಧ್ವನಿಗೆ?

ಮೈಲಿಗೆ ತೊಳೆದ ಗಂಗೆ ತುಂಗೆ
ಕಾವೇರಿಗೆ ಒಂದೆ ನಮನ
ಮನದ ಮೈಲಿಗೆ ತೊಳೆಯುತ ಬಂದ
ತಾತ್ವಿಕರಿಗೆ ನೂರ್ ನಮನ

ಜಾತಿ ಹಲವು ಒಂದೆ ಒಲವು
ಇದು ಯಾವ ಒಲವು
ಕಿಚ್ಚಿಗೂ ಜ್ಯೋತಿಗೂ ಇಲ್ಲವೆ ಭೇದ
ನಾನು ಯಾರ ಪರವು?

ಸುಳ್ಳು ಇಷ್ಟವೊ ಸತ್ಯ ಇಷ್ಟವೊ
ಹೇಳಲಿ ಭಾರತ ಮಾತೆ
ಕಟ್ಟಲು ಸೌಧ ನೆಲದ ಮೇಲೆ
ತೋರಿ ಮಕ್ಕಳಿಗೆ ಮಮತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭೂಮಿ
Next post ಬರದ ಹಾಡು

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

cheap jordans|wholesale air max|wholesale jordans|wholesale jewelry|wholesale jerseys