ಉಸಾಬರಿ

ಬರೆಯಬೇಕು ನಾ ಏನನ್ನಾದರೂ
ವರ್ಷಗಳಿಂದಲೂ ಮನ ತುಡಿಯುತ್ತಿದ್ದರೂ
ಬರೆಯಬಲ್ಲೆನಾದರೂ ನಾನು
ಉಳಿದಿರುವುದಾದರೂ ಏನು?
ಶತಶತಮಾನಗಳಿಂದ ಬರೆದು ಬರೆದು
ನವರಸಗಳೆಲ್ಲವ ಅರೆದು ಕುಡಿದು
ಮಾಡಿ ಸರಸತಿಯ ಭಂಡಾರ ಲೂಟಿ
ನನಗೇನು ಸಿಕ್ಕದು ಬರೀ ಪಾಟಿ.
ಪಂಪ ರನ್ನ ಪೊನ್ನ ಜನ್ನರ ಕಾವ್ಯದ ಗಂಟು
ನನಗಂತೂ ಅರ್‍ಥೈಸಿಕೊಳ್ಳಲಾಗದ ಕಗ್ಗಂಟು
ಕನ್ನಡದ ಕಂಪರಿಯದ ಮೂಗಿಗೆ
ದೇವಭಾಷೆಯ ಗಂಧ ಪಸರಿಸುವುದೇ
“ನೀರಿಳಿಯದ ಗಂಟಲಲಿ ಕಡುಬು”
ಮುದ್ದಣ್ಣನ ಉಕ್ತಿ
ನನ್ನ ಪಾಲಿಗಲ್ಲ ಅತಿಶಯೋಕ್ತಿ.
ಕುವೆಂಪು, ಬೇಂದ್ರೆ ಪುತಿನಾರ ಗತ್ತು
ಬ್ರಹ್ಮ ನೀಡಲಿಲ್ಲ ಬುದ್ಧಿಗೆ ಕಸರತ್ತು
ಇನ್ನು ಕಥೆ ಬರೆಯೋಣವೆನಿಸಿತು
ನನ್ನದೇ ಆಸ್ತಿ ಎಂದರು ಮಾಸ್ತಿ
ಕವನ ಗೀಚಿದರೆ ಬಲು ಸುಲಭವೆಂದುಕೊಂಡೆ
ಒಬ್ಬೊಬ್ಬ ಕವಿಗಳು ಎದುರು ಬಂದು
ನನ್ನದೇ ಪದ, ನನ್ನದೇ ಶೈಲಿ
ಅರಚಾಡಿದರು ಕಿವಿ ಮುಚ್ಚಿಕೊಂಡೆ.
ನಾಟಕವಾದರೆ ಹೇಗೆ? ಕಾಳಿದಾಸನ ಹಾಗೆ
ಈ ನಾಟಕ ಪಾಠಕ ಎಲ್ಲಾ ತಲೆಬಿಸಿ
ಹರಿಹರನ ರಗಳೆಯೇ ವಾಸಿ.
ಕಾದಂಬರಿಯೇ ಸರಿ, ಎಲ್ಲರಿಗೂ ಮೋಡಿ
ಆದರೆ ಬರೆಯುವ ಮೂಡಿಲ್ಲ ಬಿಡಿ
ಕುಣಿಯಲಾರದವಳಂದಳಂತೆ ನೆಲಡೊಂಕು
ಇಲ್ಲ ನನ್ನ ಲೇಖನಿಯ ತುದಿಯೇ ಕೊಂಕು.
ನವ್ಯಕಾವ್ಯ ಬರೆದರಾಯ್ತು ಅರ್ಥವಾಗದ ಪರಿ
ಬಲವಾಗಿ ನಿರ್ಧರಿಸಿದೆ ಮನೆಯೇ ಸರಿ
ಹೋದರಾಯ್ತು ಸಂಸಾರದಲ್ಲಿ ತರಾ ‘ವರಿ’
ದುರಾದೃಷ್ಟಕ್ಕೆ ಅಂದೇ ಮುಗಿಯಬೇಕೆ ತರಕಾರಿ
ಪಲ್ಯ ಮಾಡಲಿಲ್ಲವೆಂದು ಗಂಡನ ಮಾರ ಮಾರಿ
‘ಚೂಡಿ’ ತರಲಿಲ್ಲವೆಂದು ಮಗಳ ಕಿರಿಕಿರಿ
ಆಯಿತಲ್ಲ ಬರೆವುದಕ್ಕೆ ಕತ್ತರಿ
ಬರೆಯುವವರು ಬರೆಯಲಿ ಬಿಡಿ
ನನಗೇಕೆ ಈ ಉಸಾಬರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ಜ್ಞಾನ-ಕ್ರಿಯೆ
Next post ಹರಕು ಅಂಗಿಯ ಮುರುಕು ಮನೆಯ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

cheap jordans|wholesale air max|wholesale jordans|wholesale jewelry|wholesale jerseys