Home / ಕವನ / ಕವಿತೆ / ವಿಸ್ಮಯ

ವಿಸ್ಮಯ

ಯಾರೋ ಬರೆದ ಕವನ
ಕಾಡಿತ್ತು ಎಡೆಬಿಡೆದೆನ್ನ ಮನ
ನಿಂತಲ್ಲಿ ಕುಳಿತಲ್ಲಿ ಮಲಗಿದಲ್ಲಿ
ಬೆನ್ನು ಹತ್ತಿದ ನಕ್ಷತ್ರಿಕನಂತೆ
ಕಣ್ಣಾಡಿಸಿದೆ ಅರ್ಥವಾಗಲಿಲ್ಲ
ನವ್ಯವೋ ನವೋದಯವೋ
ಏನೋ ತೋಚಿದ್ದು ಗೀಚಿದ್ದು
ಭಟ್ಟಿ ಇಳಿಸಿದ್ದಾರೆ.

ಓದಿದೆ ಒಂದಲ್ಲ ಹತ್ತಾರು ಸಲ
ಜ್ಞಾನ ಚಕ್ಷುಗಳಿಂದ
ಪದಗಳ ಪದರವ
ನಯವಾಗಿ ಬಿಡಿಸಿದೆ.
ಅಂಟು ಅಂಟು ಬ್ರಹ್ಮಗಂಟು
ಸಾಮರಸ್ಯದ ಸವಿನಂಟು
ಒಳಹೊಕ್ಕಾಗ ವಿಸ್ಮಯ
ಶಬ್ದಲಂಕಾರದ ಚಾತುರ್‍ಯ
ಅದ್ಭುತ ಮಾಯಾಜಾಲ
ಕಳಿತ ಹೊನ್ನಿನ ಫಲ
ಒಂದೊಂದರಲ್ಲಿ ಅದೇನು ಅರ್‍ಥ
ಭಾವಾರ್‍ಥ ಗೂಢಾರ್‍ಥ
ಬೆರಗಾದೆ ಬಳಸಿದ ರೀತಿಗೆ
ಪದಗಳಿಂದ ಪದಗಳು
ಪದಗಳಲ್ಲಿ ಪದಗಳು
ಪದ್ಯವಾದದ್ದಾದರೂ ಹೇಗೆ?
ಬಾಯಿಮಾತಿನ ಮಾತಲ್ಲಿ ಬಿಡಿ
ಕಡಲ ಮಂಥನದಿಂದ
ಅಮೃತ ಹೊರ ಹೊಮ್ಮಿದಂತೆ
ಹೃದಯಾಂತರಾಳದ ಭಾವ
ಚಿಲುಮೆ ಚಿಮ್ಮಿದಂತೆ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...