Home / ಕವನ / ಕವಿತೆ / ಘಮ್ಮಂತ ಕಮ್ಮಂತ

ಘಮ್ಮಂತ ಕಮ್ಮಂತ

ಚೈತ್ರ ವೈಶಾಖದ ಶುಕ್ಲ ಪೂರ್ಣಿಮೆ
ಎಲ್ಲೆಲ್ಲೂ ಬೆಳದಿಂಗಳು ಹರಡಿದ ಬಯಲು.
ಎಲ್ಲೇ ಕಂಡ ಬೆಳಕು ಎದೆಯೊಳಗೆ ಇಳಿದ
ಭಾವ. ಅವಳು ದುಃಖದ ಮಗುವಿಗೆ
ಹುಷಾರಾಗು ಎಂದು ಹಾಲು ಕುಡಿಸುತ್ತಿದ್ದಾಳೆ.
ಜಗದ ಜನರ ಬದುಕಿನ ಘಮ ಅರಳಿ
ಅಡುಗೆ ಮನೆಯ ತುಂಬ ಬಿಳಿಬಿಳಿ ಅನ್ನ.
ಅವನು ಮುಂಜಾನೆ ಸದ್ದಿಲ್ಲದೇ ನೇಗಿಲ ಹೂಳುತ್ತಿದ್ದಾನೆ.
ಬೆವರ ಹನಿಗಳು ಆಕಾಶದಲಿ ಇಂಗಿವೆ.
ಕಾಯಕ ಜಗವ ಅರಳಿಸಿದೆ. ಅದು ಆಸೆಯಲ್ಲ.
ನಿಯಮದ ಪಾಲನೆ ಮತ್ತೆ ಅರಳಿ, ಹೂವು ಹಣ್ಣು
ಪಶು ಪಕ್ಕಿಗಳ ಸಂತತಿ ಚಿಗುರಿ, ಬನದ ತುಂಬ
ಹಸಿರೆಲೆಗಳು.

ಶುಕ್ಲ ಪೂರ್ಣಿಮೆಯ ತಣ್ಣನೆಯ ಹಳದಿ
ಬೆಳಕಿಗೆ ಕವಿಬುದ್ಧ ಅರೆದು ಅರವಳಿಕೆಯ
ಮುಚ್ಚಳ ತೆಗೆದಾಗ, ಜಗದ ನಿದ್ದೆಯಲ್ಲೂ
ಚಲನೆ, ಬೆಳಕಿನ ಬೀಜಗಳ ಚಲನೆ, ಇತಿಹಾಸ
ಮನುಕುಲದ ಚಲನೆ, ಬೀಜ ಮೂಕಮರ್ಮರವಾಗಿ
ಹಸಿರು ಚಿಗುರುವೆ ಚಲನೆ, ಜಗದ ಅಣುತೃಣವೂ
ಬದಲಾಗದ ಭೂಮಿಯ ಆಕಾಶದ ಚಲನೆ
ಶಬ್ದಗಳ ನಿಶ್ಯಬ್ದಗಳ ಚಲನೆ, ಅದು ಮೋಹದ
ಮಾಯೆಯ ಆಚೆಯ ಚಲನೆ, ಅದು ಮೋಹದ
ಮಾಯೆಯ ಆಚೆಯ ಚಲನೆ, ಭಾವ ಬುದ್ದಿಗಳ
ಅರಮನೆ, ಅದು ಧಮ್ಮ. ಇದು ಹುಟ್ಟು ಗಟ್ಟಿ ಬಂಡೆಯ
ಮೆತ್ತಗಾಗಿಸಿದೆ ಬೆಳದಿಂಗಳು.

ಸತ್ಯದ ಬೆಳದಿಂಗಳು ಎಲ್ಲರ ಪಾತ್ರೆಗಳು
ತುಂಬಿವೆ ಅವರವರ ರುಚಿಗೆ, ಮತ್ತೆ
ಅವರಿವರ ಸ್ಥಿತಿಗತಿಗೆ ಕಂಡ ನೋಟದ ಒಳ ಹರವು
ಒಳಗೊಳಗೆ ಗಟ್ಟಿಯಾಗುವ ಕಾಯಕ, ಜಗದ ಕರುಣಿಯ
ತಿಳಿಗಾಳಿ ಗಂಧ ಸೂಸಿ ಅರಿತವರೆಲ್ಲಾ ಶರಣಬುದ್ದರು
ನಡೆನುಡಿಗಳ ಪಥದ ಜೀವ ದ್ರವ್ಯ ತಂಪು ಹನಿಹನಿಯಾಗಿ
ಎದೆಗಿಳಿದ ತಣ್ಣನೆಯ ರಾತ್ರಿ ಆತ್ಮಕಲ್ಯಾಣ ಲೋಕಕಲ್ಯಾಣ
ಕುದುರೆ ಏರಿ ಹೊರಟವರೆಲ್ಲರೂ, ಜೀವ ಪ್ರೀತಿಸಿ ದೇವ
ಪ್ರೀತಿಗೆ ಒಳಗಾದರು ಮತ್ತೆ ಪೂರ್ಣ ವಿಕಾಸದ ದಾರಿ
ನಿರ್ಮಾಣವಾಯಿತು ಎಲ್ಲಾ ಪರಂಪರೆಯ ಬೆಳದಿಂಗಳ
ಶೃತಿಯಲಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...