ಮೊಳಕೆ

ಕತ್ತಲೆಯಲ್ಲಿ ಕತ್ತಲೆ ಆವರಿಸಿದ ರಾತ್ರಿ
ನಕ್ಷತ್ರಗಳು ನೆತ್ತಿಯ ಮೇಲೆ ಕುಣಿದಾಡುತ್ತಿವೆ

ವಾಸನೆ ಹೊತ್ತ ತಲೆದಿಂಬ ಅವರ ಸುಖನಿದ್ರೆ
ಆವರಿಸಿದೆ ಎಣ್ಣೆಯ ಕಮಟು ವಾಸನೆಯಲಿ.

ದೂರದಲ್ಲಿ ಎಲ್ಲೋ ನಾಯಿ ಬೆಚ್ಚಿ ಬೊಗಳಿದೆ
ಗೂರ್‍ಖಾನ ಸೀಟಿ ಅರೆಮಂಪರಿನಲಿ ಕೇಳಿಸಿದೆ.

ಪುಟ್ಟ ಚೈನು ಕಳಚಿದ ಸೈಕಲ್ಲಿನ ರಿಪೇರಿಯ
ಚಿಂತೆಯ ಕನಸುಗಳು ನಾಲ್ಕೂ ದಿಕ್ಕುಗಳ ಬಿಕ್ಕುಗಳು

ಜಾವದ ನರಳುವಿಕೆಯಲ್ಲಿ ಗಿಡದ ಹೂಗಳು
ಅರಳಿವೆ ಬೆಳಕಿಗೆ ತಮ್ಮ ಅರ್‍ಪಿಸಲು ಸಜ್ಜಾಗಿವೆ.

ಸುತ್ತಿದ ಚಾಪೆಯ ಸಂದಿಯಿಂದ ಇಲಿ ಹಾರಿ
ಬಚ್ಚಲಗೂಡು ಸೇರಿವೆ ಅವರಿವರ ಪಾದಗಳು

ಮಗು ಹೊಯ್ದ ಉಚ್ಚೆ ಜೋಳಿಗೆ ತೊಯ್ದಿದೆ
ಎದೆ ತುಂಬಿದ ಹಾಲು ಬಿಗಿದು ಅವಳು ಮುಲುಕಾಡಿದ್ದಾಳೆ

ರಾತ್ರಿಯ ಎಲ್ಲಾ ಕತ್ತಲೆ ಕನವರಿಕೆಗಳು ಮತ್ತೆ
ಹೊಸದಾಗಿ ಸೂರ್‍ಯನ ಕಿರಣದ ದಾರಿಯಲಿ
ಪಾದಗಳ ಊರುತ್ತ ನಡೆದಿವೆ

ಹೀಗೊಂದು ಕವಿತೆ ಕನ್ನಡಿ ಮುಂದೆ ನಿಂತು
ಅಲಂಕರಿಸಿಕೊಂಡಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುವ್ವಿ ಸುವ್ವ ಲಾಲೀ
Next post ನನ್ನ ಕವಿತೆ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…