Home / ಕವನ / ಕವಿತೆ / ನೀ ಗಮನಿಸು

ನೀ ಗಮನಿಸು

ಬೆಳ್ಳಕ್ಕಿ ಹಿಂಡು ಸೂರ್‍ಯ ಕಂತುವ
ಸಮಯದಲ್ಲಿ ನೆತ್ತಿ ಸವರಿ ಹಾರಿವೆ
ಅವನ ನೆನಪಲ್ಲಿ ವಿಶಾದದ ಮಬ್ಬು ಆವರಿಸಿದೆ
ದೇವರ ಮನೆಯಲ್ಲಿ ನಂದಾದೀಪ ಉರಿದಿದೆ.

ಮರಗಳ ಮೌನಗೀತೆಯನ್ನು ಹಕ್ಕಿಗಳು
ಗೂಡಿನಲ್ಲಿ ಜಪಿಸಿವೆ ಮತ್ತೆ ಪ್ರೀತಿಯ
ಪಾರಿಜಾತ ಅವನ ಒಲುಮೆಯ ದಾರಿಗೆ ಹಾಸಿವೆ
ಕೆಂಪು ಬಿಳಿ ಮಕಮಲ್ಲು ಜೀವರಸ ಹರಿದ ಸಂಧ್ಯಾರಾಗ

ಮನದ ತುಂಬ ಅವನ ಭರವಸೆಯ ಕನಸುಗಳು
ದೇಹ ಇಲ್ಲಿ ಆತ್ಮದ ಸಂಗಕೆ ಕಾದು ಕುಳಿತಿವೆ
ಅವಳು ತೊಟ್ಟಿಲು ತೂಗುತ್ತಿದ್ದಾಳೆ ನಾಳೆಯ
ಅರಳಿಸಲು ಸಂಜೆ ತಂಗಾಳಿಯ ಮಧುರ ಮಂಜುಳ.

ಖಾಲಿ ಮನೆಯಲಿ ಅವನ ಧ್ಯಾನವರಳಿ ಘಮ
ಒಲೆಯ ಮೇಲೆ ಅರಳಿದ ಬಿಳಿ ಅನ್ನ ನಿಜದ ಪ್ರೀತಿ
ಸ್ವರ್‍ಗ ಆಸೆ ಇರದ ಮನದ ನಿರ್‍ಮಲ ಪ್ರೀತಿ
ನೀಲ ಆಕಾಶದ ತುಂಬ ಸ್ವಚ್ಛಂದ ಚಿಕ್ಕಿಗಳು.

ಎಷ್ಟು ಸವೆದಿರುವೆ ದಾರಿ ದುಃಖದಲಿ ಬಳಲಿ
ನನ್ನ ನೋವಿನಲಿ ಎಷ್ಟು ಕರೆದರೂ ನೀ ಬಲುದೂರ
ಕರುಣೆಯಲಿ ಒಮ್ಮೆ ಅಪ್ಪಿಕೋ ಬೆಳದಿಂಗಳ ಸ್ಮರಿಸಿ
ಪುಟ್ಟ ಪಾದದ ಗುರುತುಗಳ ನೀ ಗಮನಿಸಬೇಕಾಗಿದೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...