ಅಕ್ಕನ ದಾರಿ

ಗೆದ್ದವಳು ನೀನು ಲಿಂಗಮುಖದಿಂದ
ಮನದೊಳು ಭಾವ ಲಿಂಗವ ಅರಳಿಸಿ
ಉಡುತಡಿಯಿಂದ ಕದಳಿಯವರೆಗೆ
ಹರಡಿ ಹಾಸಿದ ಜ್ಞಾನ ಬೆಳದಿಂಗಳು
ಧರೆಯಲ್ಲಾ ಪಸರಿಸಿ ಶರಣಸತಿ ನೀನು.

ಜಗ ನಂಬಿದ ಲಿಂಗದ ಘನವ
ನಿಮ್ಮ ನೆರೆ ನಂಬಿದ ಸದ್ಭಕ್ತರಿಗೆ ತೋರಿ
ಉಭಯ ಸಂಗವ ಅರಿಯದೆ ಪರಿಣಾಮಿಯಾಗಿ
ಅರಿವಿನೊಳಗೆ ಅರಿವ ಬೆಳಕು ಬೆಳಗಿದ ಅಕ್ಕ ನೀನು

ಕಂಗಳ ನೋಟ ಕರುವಿಟ್ಟಭಾವ ಹಿಂಗದ ಮೋಹ
ಎಂದೆಂದೂ ಚೆನ್ನಮಲ್ಲಿಕಾರ್ಜುನನ ಶಿಶು ನೀನು
ಅಗ್ನಿ ಶಿವನ ಆಚಾರ ಸರ್‍ವವ್ಯಾಪಕ ಹರಡಿ ಹಾನಿ
ಆತ್ಮ ಜ್ಞಾನವ ಪ್ರತಿಬಿಂಬಿಸಿ ಅವನೊಡಲ ಪ್ರಾಣ
ನೀನು ಘಮ

ನೀ ಹೆಜ್ಜೆ ಇರಿಸಿದ ಕಡೆಯೆಲ್ಲಾ ಕ್ಯಾದಿಗೆ ಘಮ
ನೆರಳ ತಂಪು ಕತ್ತಲೆಯ ಕರಗಿಸಿ ಬೆಳ್ಳಿ ಚಿಕ್ಕಿಗಳು
ತನ್ನ ತಾನರಿಯೆ ಅಂಗೈಯ ಲಿಂಗಧಾರಣೆ ಮಾಡಿ
ಭೂಲೋಕ ಸಮಸ್ತ ಜೀವಿಗಳಿಗೆ ಪ್ರಸಾದಿ
ಪ್ರಾಣಲಿಂಗಿಯಾದೆ.

ಮಾನವ ಬೆರಗು ನಿಬ್ಬೆರಗು ಆಗಿ ಅವನ ಲೋಕದ
ಶ್ಮದ್ಧ ಅನುಭಾವ ಮಂಟಪದಲಿ ನೀ ಹಾಡಿದ
ವಚನಗಳು ಮಲ್ಲಿಕಾರ್‍ಜುನನ ಮಹಿಮೆ ಅರುಹಿ
ಪರಾತ್ಪರ ಸತ್ಯ ಸದಾಚಾರ ಗುರುಲಿಂಗ ಜಂಗಮಕೆ
ಸಮರ್‍ಪಿಸುವೆ.

ಬಲ್ಲವರೊಡನೆ ಸಂಗಮಾಡಿ ಬೆಣ್ಣೆ ಕಡೆದು
ಕುಲಭ್ರಮೆ, ಜಾತಿ ಭ್ರಮೆ ಸರಿಸಿ ಸರ್‍ವ ಅಲಂಕಾರ ತುಪ್ಪ
ಕಾಯಿಸಿ, ಶಿವಶಕ್ತಿ ಶಿವ ಭಕ್ತಿ, ಶಿವಪ್ರಸಾದ
ಮಾಡಿ ಅಡಿಗಡಿಗೆ ಗುರುಪಾದಕೆ ನೈರ್‍ಮಲ್ಯ ನೀಡಿ ಧನ್ಯವಾದೆ.

ಅಕ್ಕ ಎಂದರೆ ಅಭಿನ್ನ ಜ್ಞಾನ. ಯತ್ರ ಜೀವ ತತ್ರಶಿವ
ಅಕ್ಕ ಎಂದರೆ ಹಿಂಗದ ಅನುಭಾವದ ನೀರಿನ ಭಾವಿ.
ಅಕ್ಕ ಎಂದರೆ ಇಹದಸುಖ ಪರದ ಗತಿಯ ದಾರಿ.
ಅಕ್ಕ ಎಂದರೆ ತನ್ನತಾನರಿತ ಕಂಗಳ ನೋಟ ಮನದ ಸೊಗಸು…..
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವನಾರೇ ಗೆಳತಿ ಅವನಾರೇ
Next post ಮಿಂಚು

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys