Home / ಕವನ / ಕವಿತೆ / ಅಕ್ಕನ ದಾರಿ

ಅಕ್ಕನ ದಾರಿ

ಗೆದ್ದವಳು ನೀನು ಲಿಂಗಮುಖದಿಂದ
ಮನದೊಳು ಭಾವ ಲಿಂಗವ ಅರಳಿಸಿ
ಉಡುತಡಿಯಿಂದ ಕದಳಿಯವರೆಗೆ
ಹರಡಿ ಹಾಸಿದ ಜ್ಞಾನ ಬೆಳದಿಂಗಳು
ಧರೆಯಲ್ಲಾ ಪಸರಿಸಿ ಶರಣಸತಿ ನೀನು.

ಜಗ ನಂಬಿದ ಲಿಂಗದ ಘನವ
ನಿಮ್ಮ ನೆರೆ ನಂಬಿದ ಸದ್ಭಕ್ತರಿಗೆ ತೋರಿ
ಉಭಯ ಸಂಗವ ಅರಿಯದೆ ಪರಿಣಾಮಿಯಾಗಿ
ಅರಿವಿನೊಳಗೆ ಅರಿವ ಬೆಳಕು ಬೆಳಗಿದ ಅಕ್ಕ ನೀನು

ಕಂಗಳ ನೋಟ ಕರುವಿಟ್ಟಭಾವ ಹಿಂಗದ ಮೋಹ
ಎಂದೆಂದೂ ಚೆನ್ನಮಲ್ಲಿಕಾರ್ಜುನನ ಶಿಶು ನೀನು
ಅಗ್ನಿ ಶಿವನ ಆಚಾರ ಸರ್‍ವವ್ಯಾಪಕ ಹರಡಿ ಹಾನಿ
ಆತ್ಮ ಜ್ಞಾನವ ಪ್ರತಿಬಿಂಬಿಸಿ ಅವನೊಡಲ ಪ್ರಾಣ
ನೀನು ಘಮ

ನೀ ಹೆಜ್ಜೆ ಇರಿಸಿದ ಕಡೆಯೆಲ್ಲಾ ಕ್ಯಾದಿಗೆ ಘಮ
ನೆರಳ ತಂಪು ಕತ್ತಲೆಯ ಕರಗಿಸಿ ಬೆಳ್ಳಿ ಚಿಕ್ಕಿಗಳು
ತನ್ನ ತಾನರಿಯೆ ಅಂಗೈಯ ಲಿಂಗಧಾರಣೆ ಮಾಡಿ
ಭೂಲೋಕ ಸಮಸ್ತ ಜೀವಿಗಳಿಗೆ ಪ್ರಸಾದಿ
ಪ್ರಾಣಲಿಂಗಿಯಾದೆ.

ಮಾನವ ಬೆರಗು ನಿಬ್ಬೆರಗು ಆಗಿ ಅವನ ಲೋಕದ
ಶ್ಮದ್ಧ ಅನುಭಾವ ಮಂಟಪದಲಿ ನೀ ಹಾಡಿದ
ವಚನಗಳು ಮಲ್ಲಿಕಾರ್‍ಜುನನ ಮಹಿಮೆ ಅರುಹಿ
ಪರಾತ್ಪರ ಸತ್ಯ ಸದಾಚಾರ ಗುರುಲಿಂಗ ಜಂಗಮಕೆ
ಸಮರ್‍ಪಿಸುವೆ.

ಬಲ್ಲವರೊಡನೆ ಸಂಗಮಾಡಿ ಬೆಣ್ಣೆ ಕಡೆದು
ಕುಲಭ್ರಮೆ, ಜಾತಿ ಭ್ರಮೆ ಸರಿಸಿ ಸರ್‍ವ ಅಲಂಕಾರ ತುಪ್ಪ
ಕಾಯಿಸಿ, ಶಿವಶಕ್ತಿ ಶಿವ ಭಕ್ತಿ, ಶಿವಪ್ರಸಾದ
ಮಾಡಿ ಅಡಿಗಡಿಗೆ ಗುರುಪಾದಕೆ ನೈರ್‍ಮಲ್ಯ ನೀಡಿ ಧನ್ಯವಾದೆ.

ಅಕ್ಕ ಎಂದರೆ ಅಭಿನ್ನ ಜ್ಞಾನ. ಯತ್ರ ಜೀವ ತತ್ರಶಿವ
ಅಕ್ಕ ಎಂದರೆ ಹಿಂಗದ ಅನುಭಾವದ ನೀರಿನ ಭಾವಿ.
ಅಕ್ಕ ಎಂದರೆ ಇಹದಸುಖ ಪರದ ಗತಿಯ ದಾರಿ.
ಅಕ್ಕ ಎಂದರೆ ತನ್ನತಾನರಿತ ಕಂಗಳ ನೋಟ ಮನದ ಸೊಗಸು…..
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...