Home / ಕವನ / ಕವಿತೆ / ಅಕ್ಕನ ದಾರಿ

ಅಕ್ಕನ ದಾರಿ

ಗೆದ್ದವಳು ನೀನು ಲಿಂಗಮುಖದಿಂದ
ಮನದೊಳು ಭಾವ ಲಿಂಗವ ಅರಳಿಸಿ
ಉಡುತಡಿಯಿಂದ ಕದಳಿಯವರೆಗೆ
ಹರಡಿ ಹಾಸಿದ ಜ್ಞಾನ ಬೆಳದಿಂಗಳು
ಧರೆಯಲ್ಲಾ ಪಸರಿಸಿ ಶರಣಸತಿ ನೀನು.

ಜಗ ನಂಬಿದ ಲಿಂಗದ ಘನವ
ನಿಮ್ಮ ನೆರೆ ನಂಬಿದ ಸದ್ಭಕ್ತರಿಗೆ ತೋರಿ
ಉಭಯ ಸಂಗವ ಅರಿಯದೆ ಪರಿಣಾಮಿಯಾಗಿ
ಅರಿವಿನೊಳಗೆ ಅರಿವ ಬೆಳಕು ಬೆಳಗಿದ ಅಕ್ಕ ನೀನು

ಕಂಗಳ ನೋಟ ಕರುವಿಟ್ಟಭಾವ ಹಿಂಗದ ಮೋಹ
ಎಂದೆಂದೂ ಚೆನ್ನಮಲ್ಲಿಕಾರ್ಜುನನ ಶಿಶು ನೀನು
ಅಗ್ನಿ ಶಿವನ ಆಚಾರ ಸರ್‍ವವ್ಯಾಪಕ ಹರಡಿ ಹಾನಿ
ಆತ್ಮ ಜ್ಞಾನವ ಪ್ರತಿಬಿಂಬಿಸಿ ಅವನೊಡಲ ಪ್ರಾಣ
ನೀನು ಘಮ

ನೀ ಹೆಜ್ಜೆ ಇರಿಸಿದ ಕಡೆಯೆಲ್ಲಾ ಕ್ಯಾದಿಗೆ ಘಮ
ನೆರಳ ತಂಪು ಕತ್ತಲೆಯ ಕರಗಿಸಿ ಬೆಳ್ಳಿ ಚಿಕ್ಕಿಗಳು
ತನ್ನ ತಾನರಿಯೆ ಅಂಗೈಯ ಲಿಂಗಧಾರಣೆ ಮಾಡಿ
ಭೂಲೋಕ ಸಮಸ್ತ ಜೀವಿಗಳಿಗೆ ಪ್ರಸಾದಿ
ಪ್ರಾಣಲಿಂಗಿಯಾದೆ.

ಮಾನವ ಬೆರಗು ನಿಬ್ಬೆರಗು ಆಗಿ ಅವನ ಲೋಕದ
ಶ್ಮದ್ಧ ಅನುಭಾವ ಮಂಟಪದಲಿ ನೀ ಹಾಡಿದ
ವಚನಗಳು ಮಲ್ಲಿಕಾರ್‍ಜುನನ ಮಹಿಮೆ ಅರುಹಿ
ಪರಾತ್ಪರ ಸತ್ಯ ಸದಾಚಾರ ಗುರುಲಿಂಗ ಜಂಗಮಕೆ
ಸಮರ್‍ಪಿಸುವೆ.

ಬಲ್ಲವರೊಡನೆ ಸಂಗಮಾಡಿ ಬೆಣ್ಣೆ ಕಡೆದು
ಕುಲಭ್ರಮೆ, ಜಾತಿ ಭ್ರಮೆ ಸರಿಸಿ ಸರ್‍ವ ಅಲಂಕಾರ ತುಪ್ಪ
ಕಾಯಿಸಿ, ಶಿವಶಕ್ತಿ ಶಿವ ಭಕ್ತಿ, ಶಿವಪ್ರಸಾದ
ಮಾಡಿ ಅಡಿಗಡಿಗೆ ಗುರುಪಾದಕೆ ನೈರ್‍ಮಲ್ಯ ನೀಡಿ ಧನ್ಯವಾದೆ.

ಅಕ್ಕ ಎಂದರೆ ಅಭಿನ್ನ ಜ್ಞಾನ. ಯತ್ರ ಜೀವ ತತ್ರಶಿವ
ಅಕ್ಕ ಎಂದರೆ ಹಿಂಗದ ಅನುಭಾವದ ನೀರಿನ ಭಾವಿ.
ಅಕ್ಕ ಎಂದರೆ ಇಹದಸುಖ ಪರದ ಗತಿಯ ದಾರಿ.
ಅಕ್ಕ ಎಂದರೆ ತನ್ನತಾನರಿತ ಕಂಗಳ ನೋಟ ಮನದ ಸೊಗಸು…..
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...