Home / ಕವನ / ಕವಿತೆ / ಕವಿ-ಕಾವ್ಯ

ಕವಿ-ಕಾವ್ಯ

ಅಪರಿಮಿತ ಕತ್ತಲೊಳಗೆ ಬೆಳಕ
ಕಿರಣಗಳ ಹುಡುಕಿದೆ. ಒಂದು ಕವಿತೆ
ಶಕ್ತಿಯಾಗಿ ಎದೆಗೆ ದಕ್ಕಿತು.
ಅಲ್ಲಿ ವಿಶೇಷ ಪರಿಪೂರ್‍ಣ ಪ್ರೀತಿ ಅರಳಿತು.
ಮೆಲ್ಲಗೆ ಹೂ ಶುಭ್ರ ಬಿಳಿಯಾಗಿ, ಕೆಂದಾವರೆ
ಗುಲಾಬಿ ಬಣ್ಣಗಳಲಿ ಅರಳಿ ಘಮ್ಮೆಂದು ಪರಿಸೃಷ್ಠಿ.

ಎದೆಯ ಮೇಲೆ ಬೀಳುವ ಎಲ್ಲಾ
ತರಂಗದ ಬೆಳಕು ಒಳಗೊಳಗೆ ಇಳಿದು
ಬೆಚ್ಚನೆಯ ಕಾವಿನಲಿ ಬಸಿರಾದ ಶಬ್ದಗಳು
ಒಡಲು ಒಜ್ಜೆಯಾಗಿ ಅಗಾಧತೆಯ ಅರಿವು,
ಮೌನದೊಳಗೆ ಸುರುಟಿಕೊಂಡ ದ್ರವ್ಯರಾಶಿ,
ಮಹಾಸ್ಪೋಟವಾದ ಸಾವಿನಾಚೆಯ ಬೆಳಕು ಕಾವ್ಯ.

ಪಠ್ಯಕ್ರಮದ ಪಾಠಶಾಲೆಯ ಪಾಕ ಕುದಿದು
ಶಬ್ದ ರೂಪಗಳ ಅನುಭವ ಕಂಡ ಬಾಳು,
ರೂಪಾಂತರದ ಜಗದ ನಿಯಮ. ತಾಳ್ಮೆಯ
ಹಾಸಿದ ನೆರಳಲಿ ಹಕ್ಕಿಹಾಡು, ಒಳಗೊಳಗೆ ಪ್ರಾಣ
ವಾಯು ಇಳಿದು, ಋತುಗಳ ಸಂವಾದ ಬುದ್ಧನ
ಆತ್ಮದ ಬೆಳದಿಂಗಳು ಹರಡಿ, ಅರಳಿದ
ಅಗೋಚರ ಮನ.

ಇಲ್ಲಿ ಕುಳಿತವರ ಸಾಲು ಕಣ್ಣುಗಳು ಮುಗಿಲ
ಮೋಡಗಳ ಅರಸಿ ಹಾರುವ ಬೆಳ್ಳಕ್ಕಿ ಸಾಲು ಹಿಂಡು,
ಆಸೆಗಳ ಜೀವರಥ ಎಳೆದ ಕನಸುಗಳ ಕನ್ನಡಿ ಪ್ರತಿಫಲಿಸಿ,
ದಾರಿತುಂಬ ಜೀವನದಿ ಹರಿದ ಬಯಲು ಹಸಿರು.
ನಕ್ಷತ್ರಗಳಿಗೆ ತುಪ್ಪ ಹಾಕಿ ಶಬ್ದಗಳ ದೀಪ ಮಾಲೆ ಹಚ್ಚಿ,
ಕತ್ತಲೆಯ ತೆರೆಯ ಬಿಡಿಸಿ ಎಲ್ಲೆಲ್ಲೂ ಬೆಳಕಿನ ಹಾಡುಗಳ
ಹಾಡಿದರು ಜಗದ ಕವಿಗಳು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...