ಹಸಿರು ಮರಗಳು ತೇರು ಎಳೆದಿವೆ

ಹಸಿರು ಮರಗಳು ತೇರು ಎಳೆದಿವೆ
ಇಗೋ ನೀಲಿಯ ಮುಗಿಲಲಿ
ಶಿಖರ ಸಾಲ್ಗಳು ತಬ್ಬಿ ನಿಂದಿವೆ
ಅಗೋ ಧಾರೆಯ ಜಲದಲಿ

ಮುಗಿಯಲಾರದ ಮುಗಿಲು ಮುಗಿದಿದೆ
ಕ್ಷಿತಿಜ ಓಕುಳಿಯಾಡಿದೆ
ಸಿಡಿಲು ಘಂಟಾನಾದ ಮೊಳಗಿದೆ
ಕಡಲು ಭೂಮಿಯ ತಬ್ಬಿದೆ

ಮಿನುಗು ತಾರೆಯ ಗಗನ ನೀರೆಯ
ಕೇಶ ಹಾಸಿದೆ ಹುಡಿಯಲಿ
ಹಗಲು ರಾತ್ರಿಯ ಮಿಲನ ಮಾಡಿದೆ
ಕಾಡು ಕಂದರ ಕೊಳದಲಿ

ಮೌನ ಗಿಣಿಯು ಮಾತನಾಡಿದೆ
ಮರಿಗೆ ಗುಟುಕನು ಉಣಿಸಿದೆ
ಮಗುವು ತಾಯಿಯ ತಬ್ಬಿ ಹಿಡಿದಿದೆ
ಎದೆಯ ಹಾಲನು ಕುಡಿದಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಕ್ಕುಬಿಡು
Next post ಲಾಭವದಾರಿಗೊ? ರಸ ಗೊಬ್ಬರವಿದ್ಯಾಕೋ?

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…