ನಾವು ಗೆಳೆಯರು ಹೂವು ಹಣ್ಣಿಗೆ

ನಾವು ಗೆಳೆಯರು ಹೂವು ಹಣ್ಣಿಗೆ
ಚಿಗುರು ಕಾಯಿಗೆ ಚಲುವಿಗೆ
ನಾವು ಹೊಸಯುಗ ನಗೆಯ ಹುಡುಗರು
ಕಲ್ಲು ಮುಳ್ಳಿಗೆ ಕಾಡಿಗೆ

ಗಿಡದ ಹಕ್ಕಿಯ ಕಂಠ ಕಂಠಕೆ
ಸಿಹಿಯ ಸಕ್ಕರೆ ಹಂಚುವಾ
ಮುಗಿಲ ಗಲ್ಲಕೆ ಪ್ರೀತಿ ತುಂಬಿಸಿ
ಗುಡ್ಡ ಬೆಟ್ಟವ ನಗಿಸುವಾ

ಹೊಲವ ನಂಬಿಸಿ ನೆಲವ ಚುಂಬಿಸಿ
ಹಸಿರು ಹೂವು ಬೆಳೆಸುವಾ
ಹಳೆಯ ಗವಿಯಲಿ ಕೊಳೆಯ ಮಳೆಯಲಿ
ಬಿಸಿಲ ಕೋಲನು ಬೀಸುವಾ

ಎಲ್ಲಿ ಕತ್ತಲೆ ಹಾವು ಚೇಳು
ಕರಿಯ ಕಂಬಳಿ ಹಾಸಿವೆ
ಅಲ್ಲಿ ಬೆಳಕಿನ ಹೊಳೆಯ ಹರಿಸುವ
ದೀಪ ಮಾಲೆಯ ಹಚ್ಚುವಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಗೂಢ
Next post ಬರಿ ಸುಳ್ಳಲ್ಲವೇ? ಕೃಷಿ ತಜ್ಞರೊರೆಯುವುದು?

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…