Home / ಕವನ / ಕವಿತೆ / ಡಾ|| ರಾಜ್

ಡಾ|| ರಾಜ್

ರಾಜ ಮುತ್ತು ರಾಜ
ಕನ್ನಡದ ನೀ ಮುದ್ದು ರಾಜ || ಪ ||

ರಂಗಭೂಮಿಯ ಕೃಷಿ ಅಂಗಳದಲಿ
ನಟನೆಯ ಕಲೆಯ ಬೀಜ ನೀವಾಗಿ
ಸಸಿಯಾಗಿ ಮೊಳಕೆಯೊಡೆದು ಸಿನಿಮಾದಲ್ಲಿ
ಹೆಮ್ಮರವಾಗಿ ಬೆಳೆದು ನೆರಳಾದೆ ಕಲೆಗೆ

ಗಾನ ಕೋಗಿಲೆಗಳ ಗಾನಸಿರಿಯಾಗಿ
ಗಂಧರ್ವ ಲೋಕವ ನೀ ಸೃಷ್ಟಿಸಿದೆ
ಯೋಗಿಯಾಗಿ ತ್ಯಾಗಿಯಾಗಿ
ಕಲೆಯಲೇ ನೀ ಜೀವತೇಯ್ದು
ಕನ್ನಡದ ಮೇರು ನಟನಾಗಿ ನಿಂತಿಹೆ

ಕನ್ನಡದ ಹೆಮ್ಮೆಯ ಪುತ್ರನಾಗಿ
ಕನ್ನಡ ರಥವ ನೀನೇರಿ ನಡೆದೆ
ಅಭಿಮಾನಿಗಳು ನಿನ್ನ ದೇವರೆಂದರೂ
ಅಭಿಮಾನಿಗಳೇ ನಿನ್ನ ದೇವರೆಂದು ತೋರಿ
ಸರಳತೆಯ ಸಾಕಾರ ಮೂರ್ತಿ ನೀನಾದೆ

ಅದೆಷ್ಟೋ ಪ್ರಶಸ್ತಿ ಪುರಸ್ಕಾರಗಳು
ನಿನ್ನೊಡಲಿಗೆ ಬಂದು ಸೇರಿದರೂ
ಅಹಂಕಾರವೂ ನಿನ್ನಲ್ಲಿ ಸುಳಿಯಲಿಲ್ಲ
ಸರಳತೆ ನಿನ್ನ ಜೀವನ ಗಾಯನ
ಆಯಿತು ಇತರರಿಗೂ ಮಾರ್ಗದರ್ಶನ

ನೀನೆಂದಿಗೂ ನಮ್ಮೆಲ್ಲರ ಸ್ಫೂರ್ತಿಯಾಗಿರುವೆ
ಮಣ್ಣಲ್ಲಿ ಮಣ್ಣಾಗಿ ಹೋದರೂ
ಕನ್ನಡ ಮಣ್ಣಲಿ ಚಿರ ಚೇತನವಾಗಿರುವೆ
ನೀ ರಾಜಕುಮಾರ ಎಂದೆಂದಿಗೂ
ಕುಮಾರನೇ ಕನ್ನಡಮ್ಮನ ಕುವರನೇ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...