ಡಾ|| ರಾಜ್

ರಾಜ ಮುತ್ತು ರಾಜ
ಕನ್ನಡದ ನೀ ಮುದ್ದು ರಾಜ || ಪ ||

ರಂಗಭೂಮಿಯ ಕೃಷಿ ಅಂಗಳದಲಿ
ನಟನೆಯ ಕಲೆಯ ಬೀಜ ನೀವಾಗಿ
ಸಸಿಯಾಗಿ ಮೊಳಕೆಯೊಡೆದು ಸಿನಿಮಾದಲ್ಲಿ
ಹೆಮ್ಮರವಾಗಿ ಬೆಳೆದು ನೆರಳಾದೆ ಕಲೆಗೆ

ಗಾನ ಕೋಗಿಲೆಗಳ ಗಾನಸಿರಿಯಾಗಿ
ಗಂಧರ್ವ ಲೋಕವ ನೀ ಸೃಷ್ಟಿಸಿದೆ
ಯೋಗಿಯಾಗಿ ತ್ಯಾಗಿಯಾಗಿ
ಕಲೆಯಲೇ ನೀ ಜೀವತೇಯ್ದು
ಕನ್ನಡದ ಮೇರು ನಟನಾಗಿ ನಿಂತಿಹೆ

ಕನ್ನಡದ ಹೆಮ್ಮೆಯ ಪುತ್ರನಾಗಿ
ಕನ್ನಡ ರಥವ ನೀನೇರಿ ನಡೆದೆ
ಅಭಿಮಾನಿಗಳು ನಿನ್ನ ದೇವರೆಂದರೂ
ಅಭಿಮಾನಿಗಳೇ ನಿನ್ನ ದೇವರೆಂದು ತೋರಿ
ಸರಳತೆಯ ಸಾಕಾರ ಮೂರ್ತಿ ನೀನಾದೆ

ಅದೆಷ್ಟೋ ಪ್ರಶಸ್ತಿ ಪುರಸ್ಕಾರಗಳು
ನಿನ್ನೊಡಲಿಗೆ ಬಂದು ಸೇರಿದರೂ
ಅಹಂಕಾರವೂ ನಿನ್ನಲ್ಲಿ ಸುಳಿಯಲಿಲ್ಲ
ಸರಳತೆ ನಿನ್ನ ಜೀವನ ಗಾಯನ
ಆಯಿತು ಇತರರಿಗೂ ಮಾರ್ಗದರ್ಶನ

ನೀನೆಂದಿಗೂ ನಮ್ಮೆಲ್ಲರ ಸ್ಫೂರ್ತಿಯಾಗಿರುವೆ
ಮಣ್ಣಲ್ಲಿ ಮಣ್ಣಾಗಿ ಹೋದರೂ
ಕನ್ನಡ ಮಣ್ಣಲಿ ಚಿರ ಚೇತನವಾಗಿರುವೆ
ನೀ ರಾಜಕುಮಾರ ಎಂದೆಂದಿಗೂ
ಕುಮಾರನೇ ಕನ್ನಡಮ್ಮನ ಕುವರನೇ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲಾಕೃತಿಯೊಂದು
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೦೮

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys