ಹೊಸ ಬಾಳು

ಅರಿತ ಜೀವಿಗಳೆರಡು ಬೆರೆತು
ಸಪ್ತಪದಿಯ ಹಾದಿ ತುಳಿದು
ಜೀವನ ಸಂಗಾತಿಗಳಾಗಿ ನಡೆದು
ಬಾಳ ದೋಣಿಯನೇರಿ ತೀರ ಬಿಡಲು
ಪಯಣವು ಹಾಯಾಗಿ ಸಾಗಿರಲು

ದೂರ ತೀರವ ಸೇರುವ ತವಕ
ನಡೆಯುತಿರಲು ಪ್ರೀತಿಯ ಪುಳಕ
ಪ್ರಣಯದ ಗೀತೆಯ ಹಾಡಿತು ಮನ
ಮಧು ಚಂದ್ರದಲಿ ಒಂದಾದರು ದಿನ
ಕಾಲ ಉರುಳಿ ಕರುಳ ಕುಡಿಗಳ ಜನನ

ಏಳು ಬೀಳಿನ ಅಲೆಗಳಲ್ಲಿ ಸಾಗಿ
ಏರಿಳಿದು ಮುಂದೆ ಸಾಗುತಲಿ ಜೊತೆಯಾಗಿ
ಮಮತೆಯ ಮೂರು ಮಕ್ಕಳ ಜೊತೆ ಸಾಗಿದ
ತುಂಬು ಸಂಸಾರದ ದೋಣಿಯ ಮಧ್ಯ
ಮೋಹದ ಸೆಳೆವಿಗೆ ಸಿಲುಕಿಕೊಂಡಿತ್ತು

ಸ್ವಚ್ಛಂದದ ಸಂಸಾರದ ನಡುವೆ
ಪತಿಯ ಅರಿವಿಗೆ ಮಂಕು ಕವಿದಿತ್ತು
ಮೋಹಿನಿಗೆ ಮೋಹಕೆ ಮನ ಸೋತಿತ್ತು
ಪ್ರೀತಿಯ ಬಲೆಯೊಳಗೆ ಜೀವ ಸಿಲುಕಿತ್ತು
ಬೇರೆ ಸುಂದರ ದೋಣಿ ಏರುವ ಮನಸ್ಸಾಗಿತ್ತು

ಸವತಿಯ ಚೆಲ್ಲಾಟಕೆ ರೋಸಿದ ಸತಿಯು
ದಿನವೂ ಹರಿಸಿದಳು ಕಣ್ಣೀರ ಕೋಡಿಯ
ಸಂಸಾರ ಸೂತ್ರ ಹರಿದ ಗಾಳಿ ಪಟವಾಯಿತೆಂದು
ಅಂಗಲಾಚಿ ತಿದ್ದಿ ಬುದ್ಧಿ ಹೇಳಿ ಬೇಡಿಕೊಂಡರೂ
ಬಿಡದಾದ ಪತಿಯು ಮೋಹಿನಿಯ ಸಂಪರ್ಕವನ್ನು

ಮಡದಿ ಮಕ್ಕಳ ದೂರ ಮಾಡಲಾಗದೆ
ಪ್ರೇಯಸಿಯ ಸಂಗವನ್ನು ಬಿಡಲಾಗದೆ
ಅತಂತ್ರದಿ ಅವನು ಕುಡಿತಕೆ ದಾಸನಾಗಿ
ದಿನಗಳು ಕಳೆದ ಮೇಲೆ ತಪ್ಪಿನ ಅರಿವಾಗಿ
ಪ್ರಾಯಶ್ಚಿತ್ತವ ಬಯಸಿದ ಮಾಡಿದ ತಪ್ಪಿಗಾಗಿ

ಮಡದಿಯ ಬಳಿಯಲಿ ಮೌನವ ಮುರಿದು
ಮಾಡಿದ ತಪ್ಪನು ಮನ್ನಿಸಿ ಬಿಡು ನೀ ಎಂದು
ಅದೇ ತಪ್ಪು ಮಾಡೆನೆಂಬ ಭಾಷೆಯ ಇತ್ತು
ರತ್ನವೇ ನೀನು ನನ್ನೊಡನೆ ಇರುವಾಗಲೂ
ಅರಿಯದೆ ಹೋಗಿ ದ್ರೋಹವ ಮಾಡಿದೆ ಎನ್ನಲು
ಸತಿಯ ಮನ ಕರಗಿ ನೀರಾಗಿ ಹೋಗಲು

ವಸಂತನ ಆಗಮನದಿ ಪ್ರಕೃತಿ ಹಸಿರಾದಂತೆ
ಬಾಡಿದ ಬದುಕದು ಮತ್ತೆ ಚಿಗುರೊಡೆದು
ಇಬ್ಬರ ಮನದೊಳು ಆಸೆಗಳು ಚಿಗುರಿದವು
ಅರಿತ ಜೀವಿಗಳೆರಡು ಒಂದೊಂದಾಗಿ ಬೆರೆತು
ದೋಣಿಯ ಪಯಣವು ಮತ್ತೆ ಸಾಗಿತ್ತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒರೆಸಿಹೋಗುತ್ತವೆ
Next post ಸಂತೆಯಲ್ಲಿ

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys