Home / ಕವನ / ಕವಿತೆ / ಹೊಸ ಬಾಳು

ಹೊಸ ಬಾಳು

ಅರಿತ ಜೀವಿಗಳೆರಡು ಬೆರೆತು
ಸಪ್ತಪದಿಯ ಹಾದಿ ತುಳಿದು
ಜೀವನ ಸಂಗಾತಿಗಳಾಗಿ ನಡೆದು
ಬಾಳ ದೋಣಿಯನೇರಿ ತೀರ ಬಿಡಲು
ಪಯಣವು ಹಾಯಾಗಿ ಸಾಗಿರಲು

ದೂರ ತೀರವ ಸೇರುವ ತವಕ
ನಡೆಯುತಿರಲು ಪ್ರೀತಿಯ ಪುಳಕ
ಪ್ರಣಯದ ಗೀತೆಯ ಹಾಡಿತು ಮನ
ಮಧು ಚಂದ್ರದಲಿ ಒಂದಾದರು ದಿನ
ಕಾಲ ಉರುಳಿ ಕರುಳ ಕುಡಿಗಳ ಜನನ

ಏಳು ಬೀಳಿನ ಅಲೆಗಳಲ್ಲಿ ಸಾಗಿ
ಏರಿಳಿದು ಮುಂದೆ ಸಾಗುತಲಿ ಜೊತೆಯಾಗಿ
ಮಮತೆಯ ಮೂರು ಮಕ್ಕಳ ಜೊತೆ ಸಾಗಿದ
ತುಂಬು ಸಂಸಾರದ ದೋಣಿಯ ಮಧ್ಯ
ಮೋಹದ ಸೆಳೆವಿಗೆ ಸಿಲುಕಿಕೊಂಡಿತ್ತು

ಸ್ವಚ್ಛಂದದ ಸಂಸಾರದ ನಡುವೆ
ಪತಿಯ ಅರಿವಿಗೆ ಮಂಕು ಕವಿದಿತ್ತು
ಮೋಹಿನಿಗೆ ಮೋಹಕೆ ಮನ ಸೋತಿತ್ತು
ಪ್ರೀತಿಯ ಬಲೆಯೊಳಗೆ ಜೀವ ಸಿಲುಕಿತ್ತು
ಬೇರೆ ಸುಂದರ ದೋಣಿ ಏರುವ ಮನಸ್ಸಾಗಿತ್ತು

ಸವತಿಯ ಚೆಲ್ಲಾಟಕೆ ರೋಸಿದ ಸತಿಯು
ದಿನವೂ ಹರಿಸಿದಳು ಕಣ್ಣೀರ ಕೋಡಿಯ
ಸಂಸಾರ ಸೂತ್ರ ಹರಿದ ಗಾಳಿ ಪಟವಾಯಿತೆಂದು
ಅಂಗಲಾಚಿ ತಿದ್ದಿ ಬುದ್ಧಿ ಹೇಳಿ ಬೇಡಿಕೊಂಡರೂ
ಬಿಡದಾದ ಪತಿಯು ಮೋಹಿನಿಯ ಸಂಪರ್ಕವನ್ನು

ಮಡದಿ ಮಕ್ಕಳ ದೂರ ಮಾಡಲಾಗದೆ
ಪ್ರೇಯಸಿಯ ಸಂಗವನ್ನು ಬಿಡಲಾಗದೆ
ಅತಂತ್ರದಿ ಅವನು ಕುಡಿತಕೆ ದಾಸನಾಗಿ
ದಿನಗಳು ಕಳೆದ ಮೇಲೆ ತಪ್ಪಿನ ಅರಿವಾಗಿ
ಪ್ರಾಯಶ್ಚಿತ್ತವ ಬಯಸಿದ ಮಾಡಿದ ತಪ್ಪಿಗಾಗಿ

ಮಡದಿಯ ಬಳಿಯಲಿ ಮೌನವ ಮುರಿದು
ಮಾಡಿದ ತಪ್ಪನು ಮನ್ನಿಸಿ ಬಿಡು ನೀ ಎಂದು
ಅದೇ ತಪ್ಪು ಮಾಡೆನೆಂಬ ಭಾಷೆಯ ಇತ್ತು
ರತ್ನವೇ ನೀನು ನನ್ನೊಡನೆ ಇರುವಾಗಲೂ
ಅರಿಯದೆ ಹೋಗಿ ದ್ರೋಹವ ಮಾಡಿದೆ ಎನ್ನಲು
ಸತಿಯ ಮನ ಕರಗಿ ನೀರಾಗಿ ಹೋಗಲು

ವಸಂತನ ಆಗಮನದಿ ಪ್ರಕೃತಿ ಹಸಿರಾದಂತೆ
ಬಾಡಿದ ಬದುಕದು ಮತ್ತೆ ಚಿಗುರೊಡೆದು
ಇಬ್ಬರ ಮನದೊಳು ಆಸೆಗಳು ಚಿಗುರಿದವು
ಅರಿತ ಜೀವಿಗಳೆರಡು ಒಂದೊಂದಾಗಿ ಬೆರೆತು
ದೋಣಿಯ ಪಯಣವು ಮತ್ತೆ ಸಾಗಿತ್ತು
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...