Home / ಕವನ / ಕವಿತೆ / ಹೊಸ ಬಾಳು

ಹೊಸ ಬಾಳು

ಅರಿತ ಜೀವಿಗಳೆರಡು ಬೆರೆತು
ಸಪ್ತಪದಿಯ ಹಾದಿ ತುಳಿದು
ಜೀವನ ಸಂಗಾತಿಗಳಾಗಿ ನಡೆದು
ಬಾಳ ದೋಣಿಯನೇರಿ ತೀರ ಬಿಡಲು
ಪಯಣವು ಹಾಯಾಗಿ ಸಾಗಿರಲು

ದೂರ ತೀರವ ಸೇರುವ ತವಕ
ನಡೆಯುತಿರಲು ಪ್ರೀತಿಯ ಪುಳಕ
ಪ್ರಣಯದ ಗೀತೆಯ ಹಾಡಿತು ಮನ
ಮಧು ಚಂದ್ರದಲಿ ಒಂದಾದರು ದಿನ
ಕಾಲ ಉರುಳಿ ಕರುಳ ಕುಡಿಗಳ ಜನನ

ಏಳು ಬೀಳಿನ ಅಲೆಗಳಲ್ಲಿ ಸಾಗಿ
ಏರಿಳಿದು ಮುಂದೆ ಸಾಗುತಲಿ ಜೊತೆಯಾಗಿ
ಮಮತೆಯ ಮೂರು ಮಕ್ಕಳ ಜೊತೆ ಸಾಗಿದ
ತುಂಬು ಸಂಸಾರದ ದೋಣಿಯ ಮಧ್ಯ
ಮೋಹದ ಸೆಳೆವಿಗೆ ಸಿಲುಕಿಕೊಂಡಿತ್ತು

ಸ್ವಚ್ಛಂದದ ಸಂಸಾರದ ನಡುವೆ
ಪತಿಯ ಅರಿವಿಗೆ ಮಂಕು ಕವಿದಿತ್ತು
ಮೋಹಿನಿಗೆ ಮೋಹಕೆ ಮನ ಸೋತಿತ್ತು
ಪ್ರೀತಿಯ ಬಲೆಯೊಳಗೆ ಜೀವ ಸಿಲುಕಿತ್ತು
ಬೇರೆ ಸುಂದರ ದೋಣಿ ಏರುವ ಮನಸ್ಸಾಗಿತ್ತು

ಸವತಿಯ ಚೆಲ್ಲಾಟಕೆ ರೋಸಿದ ಸತಿಯು
ದಿನವೂ ಹರಿಸಿದಳು ಕಣ್ಣೀರ ಕೋಡಿಯ
ಸಂಸಾರ ಸೂತ್ರ ಹರಿದ ಗಾಳಿ ಪಟವಾಯಿತೆಂದು
ಅಂಗಲಾಚಿ ತಿದ್ದಿ ಬುದ್ಧಿ ಹೇಳಿ ಬೇಡಿಕೊಂಡರೂ
ಬಿಡದಾದ ಪತಿಯು ಮೋಹಿನಿಯ ಸಂಪರ್ಕವನ್ನು

ಮಡದಿ ಮಕ್ಕಳ ದೂರ ಮಾಡಲಾಗದೆ
ಪ್ರೇಯಸಿಯ ಸಂಗವನ್ನು ಬಿಡಲಾಗದೆ
ಅತಂತ್ರದಿ ಅವನು ಕುಡಿತಕೆ ದಾಸನಾಗಿ
ದಿನಗಳು ಕಳೆದ ಮೇಲೆ ತಪ್ಪಿನ ಅರಿವಾಗಿ
ಪ್ರಾಯಶ್ಚಿತ್ತವ ಬಯಸಿದ ಮಾಡಿದ ತಪ್ಪಿಗಾಗಿ

ಮಡದಿಯ ಬಳಿಯಲಿ ಮೌನವ ಮುರಿದು
ಮಾಡಿದ ತಪ್ಪನು ಮನ್ನಿಸಿ ಬಿಡು ನೀ ಎಂದು
ಅದೇ ತಪ್ಪು ಮಾಡೆನೆಂಬ ಭಾಷೆಯ ಇತ್ತು
ರತ್ನವೇ ನೀನು ನನ್ನೊಡನೆ ಇರುವಾಗಲೂ
ಅರಿಯದೆ ಹೋಗಿ ದ್ರೋಹವ ಮಾಡಿದೆ ಎನ್ನಲು
ಸತಿಯ ಮನ ಕರಗಿ ನೀರಾಗಿ ಹೋಗಲು

ವಸಂತನ ಆಗಮನದಿ ಪ್ರಕೃತಿ ಹಸಿರಾದಂತೆ
ಬಾಡಿದ ಬದುಕದು ಮತ್ತೆ ಚಿಗುರೊಡೆದು
ಇಬ್ಬರ ಮನದೊಳು ಆಸೆಗಳು ಚಿಗುರಿದವು
ಅರಿತ ಜೀವಿಗಳೆರಡು ಒಂದೊಂದಾಗಿ ಬೆರೆತು
ದೋಣಿಯ ಪಯಣವು ಮತ್ತೆ ಸಾಗಿತ್ತು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...