ಭೇದ

ಕರ್ನಾಟಕ ನಮ್ಮದು, ಆದರೆ
ಕಾವೇರಿ ನಮ್ಮದಲ್ಲ ಎನ್ನುವ
ಮನೋ ಭಾವ ಕೆಲವರದ್ದು
ಮನದಿಂದ ಕಿತ್ತೊಗೆದು ಒಂದಾಗಬೇಕು
ಕನ್ನಡಿಗರು ಮೊದಲು ಇದನ್ನು

ಕಾವೇರಿಯಾದರೇನು? ಕೃಷ್ಣೆ, ತುಂಗ
ಭದ್ರ, ಮಹದಾಯಿ ಆದರೇನು?
ರಾಜ್ಯದ ವಿಚಾರ ಬಂದಾಗ ಕನ್ನಡಿಗರೆಲ್ಲ
ಒಂದೇ ಎನ್ನುವ ಮನೋ ಭಾವ ಇರಲಿ

ಮನೆಯೊಳಗೆ ಕಲಹಕೆ
ಸಹೋದರರೇ ದಾಯಾದಿಗಳಂತೆ
ನೆರೆಮನೆಗಳ ಕಲಹದಲಿ
ದಾಯಾದಿಗಳೇ ಒಂದಾಗುವರು

ಓಣಿಯ ಅಥವಾ ಕೇರಿಗಳ ಕಲಹದಲಿ
ಮನೆ-ಮನೆಗಳು ಕಲಹ ಮರೆತು
ಒಂದಾಗಿ ಓಣಿಯೇ ಸೇರಿ ಒಂದಾಗಿ ನಿಲ್ಲುವುವು
ಅದೇ ರೀತಿಯಲ್ಲಿ ನಾವು ಕೂಡ

ರಾಜ್ಯದ ಸಮಸ್ಯೆಗೆ ರಾಜ್ಯವೇ ಒಂದಾಗಿ
ದೇಶದ ಸಮಸ್ಯೆಗೆ ರಾಜ್ಯಗಳೆಲ್ಲಾ ಒಂದಾಗಿ
ಸಮಸ್ಯೆಯನ್ನು ಎದುರಿಸುವ ಮನೋಭಾವ
ಬೆಳೆಸಿಕೊಂಡಾಗಲೇ ಮಾತ್ರ ನಾವು
ನಡೆಸಬಹುದು ನೆಮ್ಮದಿಯ ಜೀವನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೊನೆಗೀಗ ನೋವೆಂದರೆ…..
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೦

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys