ಭೇದ

ಕರ್ನಾಟಕ ನಮ್ಮದು, ಆದರೆ
ಕಾವೇರಿ ನಮ್ಮದಲ್ಲ ಎನ್ನುವ
ಮನೋ ಭಾವ ಕೆಲವರದ್ದು
ಮನದಿಂದ ಕಿತ್ತೊಗೆದು ಒಂದಾಗಬೇಕು
ಕನ್ನಡಿಗರು ಮೊದಲು ಇದನ್ನು

ಕಾವೇರಿಯಾದರೇನು? ಕೃಷ್ಣೆ, ತುಂಗ
ಭದ್ರ, ಮಹದಾಯಿ ಆದರೇನು?
ರಾಜ್ಯದ ವಿಚಾರ ಬಂದಾಗ ಕನ್ನಡಿಗರೆಲ್ಲ
ಒಂದೇ ಎನ್ನುವ ಮನೋ ಭಾವ ಇರಲಿ

ಮನೆಯೊಳಗೆ ಕಲಹಕೆ
ಸಹೋದರರೇ ದಾಯಾದಿಗಳಂತೆ
ನೆರೆಮನೆಗಳ ಕಲಹದಲಿ
ದಾಯಾದಿಗಳೇ ಒಂದಾಗುವರು

ಓಣಿಯ ಅಥವಾ ಕೇರಿಗಳ ಕಲಹದಲಿ
ಮನೆ-ಮನೆಗಳು ಕಲಹ ಮರೆತು
ಒಂದಾಗಿ ಓಣಿಯೇ ಸೇರಿ ಒಂದಾಗಿ ನಿಲ್ಲುವುವು
ಅದೇ ರೀತಿಯಲ್ಲಿ ನಾವು ಕೂಡ

ರಾಜ್ಯದ ಸಮಸ್ಯೆಗೆ ರಾಜ್ಯವೇ ಒಂದಾಗಿ
ದೇಶದ ಸಮಸ್ಯೆಗೆ ರಾಜ್ಯಗಳೆಲ್ಲಾ ಒಂದಾಗಿ
ಸಮಸ್ಯೆಯನ್ನು ಎದುರಿಸುವ ಮನೋಭಾವ
ಬೆಳೆಸಿಕೊಂಡಾಗಲೇ ಮಾತ್ರ ನಾವು
ನಡೆಸಬಹುದು ನೆಮ್ಮದಿಯ ಜೀವನ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...