ಮೈಥಿಲಿ

ಗೋವೆಯ ಕಡಲಿಂದ ಎದ್ದು ಬಂದ
ಜಲದೇವತೆ ನೀ ನೀಲ ಸುನೇತ್ರೀ
ಮಿಥಿಲಾ ನಗರದ ವರಪುತ್ರೀ ||

ಬಂದಿಹೆ ನೀ ಹೊಸ ಬಾಳನರಸಿ
ಆಗುವೆ ನೀ ಎನ್ನ ಬಾಳಿನ ಅರಸಿ |
ಸ್ವಾಗತ ನಿನಗೀ ಚೆಲುವಿನ ನಾಡಿಗೆ
ಕಲೆಗಳ ತೌರಾದ ಕನ್ನಡ ನಾಡಿಗೆ ||೧||

ಕವಿಗಳು ಹಾಡಿದ ಕನಸಿನ ಹಾಡು
ಕೋಗಿಲೆ ಗಾನದ ನನಸಿನ ನಾಡು |
ರಸಿಕರ ಮೋಹಕ ಉದ್ಯಾನ ನಗರ
ಆಗಲಿ ನಿನಗಿದು ಆನಂದ ಸಾಗರ ||೨||

ಗೋವೆಯ ಕಡಲಿಂದ ಎದ್ದು ಬಂದ
ಜಲದೇವತೆ ನೀ ನೀಲ ಸುನೇತ್ರೀ
ಮಿಥಿಲಾ ನಗರದ ವರಪುತ್ರೀ ||೩||
*****
೨೬-೧೦-೧೯೮೩

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಣ್ಣೀರು
Next post ಮಗುವಿನೊಡನೆ

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys