ಸೃಷ್ಟಿಕರ್‍ತ

ಸದಾ ಉತ್ಸವ ಜಗದೊಳಗೆ-
ಉಳುವ, ಬಿತ್ತುವ, ಟಿಸಿಲೊಡೆಯುವ
ಕಾಯಿಯಾಗುವ, ಮಾಗುವ ಸಂಭ್ರಮ ಪ್ರಕೃತಿಗೆ!
ಹಸಿರು ತೋರಣ, ಋತುಗಳ ಮೆರವಣಿಗೆ,
ಬಣ್ಣಗಳ ಚೆಲ್ಲಾಟ, ಹಕ್ಕಿಗಳ ಕಲರವ, ಗಾಳಿಯ ನಿನಾದ,
ಸೂರ್‍ಯನ ಬಿಸಿ, ಚಂದಿರನ ತಂಪು
ಹೇಗೆ ಸೃಷ್ಟಿಸಿದೆ ಇದನ್ನೆಲ್ಲ?

ಭಾವಗಳ ರಂಗು ಹೃದಯದ ಒಸರಲ್ಲಿ
ಹೊಂಬಣ್ಣದ ತೆನೆ ಹಸಿರಿನ ಬಸಿರಲ್ಲಿ
ಬಣ್ಣಗಳ ಮೇಳ ಧರಣಿಯ ಉಸಿರಲ್ಲಿ
ಧರಿತ್ರಿಗೆ ಕಿರೀಟಗಳು ಹಿಮಚ್ಛಾದಿತ ಪರ್ವತಶ್ರೇಣಿಗಳು
ಏರದೆಗೆ ಪೀಠಗಳು ಗುಡ್ಡ ಬೆಟ್ಟಗಳು
ಜೀವಚರಗಳಿಗೆ ಜೀವಸೆಲೆ ಜಲಪಾತ, ಝರಿಗಳು.
ಜೀವಜಲಕೆ ಒಸರು ನದಿ, ಕೆರೆ, ಸರೋವರಗಳು!
ಹೇಗೆ ಸೃಷ್ಟಿಸಿದೆ ಇದನ್ನೆಲ್ಲ?

ಪ್ರಥ್ವಿಯ ಜತೆಗೆ ಸಾಗರವನ್ನಿಟ್ಟೆ
ಕಂಬಗಳಿಲ್ಲದೆ ಬಾನಿನ ಚಪ್ಪರ ಹಾಕಿಯೇ ಬಿಟ್ಟೆ
ಭೂಮಿಯ ಮೇಲೆ ಪಶುಪಕ್ಷಿ ಪ್ರಾಣಿಗಳ ಓಡಾಡಬಿಟ್ಟೆ,
ಮನುಷ್ಯರ ಸೃಷ್ಟಿಸಿ ಭಾವಗಳ ರಂಗನು ತುಂಬಿ ಆಳಲು ಬಿಟ್ಟೆ
ಸಾಗರದೊಳಗೆ ಬಣ್ಣ ಬಣ್ಣದ ಜಲಚರಗಳ ತೇಲಿಸಿಬಿಟ್ಟೆ
ಪುಟ್ಟ, ಚಿಟ್ಟೆಗಳ ಬಣ್ಣದಲ್ಲದ್ದಿ ಮೆರೆಯಲು ಬಿಟ್ಟೆ.
ಎಲ್ಲವೂ ನಿನ್ನಯ ಸೃಷ್ಟಿ. ಆದರೂ ಬೇರೆ ಬೇರೆ.
ಒಂದರ ಹಾಗೆ ಇನ್ನೊಂದಿಲ್ಲ.
ಒಂದರ ಬಣ್ಣ ಇನ್ನೊಂದಕ್ಕಿಲ್ಲ.
ಎಲ್ಲಿಂದ ತಂದೆ ಇಷ್ಟೊಂದು ವೈವಿಧ್ಯತೆ?

ಹೆಣ್ಣಿನ ಜತೆಗೆ ಗಂಡನ್ನಿಟ್ಟೆ
ಭಾವಗಳ ಓಟಕೆ ರಂಗನು ಎರೆದೆ.
ಕಾಮದ ಬೆಂಕಿಯ ಉರಿಸಿ ಹೊಸಹುಟ್ಟಿಗೆ ಇಂಬನ್ನಿತ್ತೆ.
ಪ್ರೀತಿ ಪಾಠದ ಅಕ್ಕರಿಗ ನೀನು
ಪ್ರೀತಿಯೇ ಜಗದ ಉಸಿರೆಂದೆ.
ಆದರೂ ಪ್ರೀತಿಯ ಜತೆಗೆ ದ್ವೇಷವನ್ನಿಟ್ಟೆ
ಸುಖದ ಜತೆಗೆ ದುಃಖವನ್ನಿಟ್ಟೆ
ಯಾಕೆ ಹೀಗೆ ಮಾಡಿದೆ?

ಹಗಲಿನಾಗಸದಲಿ ನೇಸರ ಹೊಂಬಿಸಲು
ಇರುಳಿನಾಕಾಶದಲಿ ಶಶಿಯ ತಂಬೆಳಕು;
ಅಂಬರದಂಗಳದಲಿ ನಕ್ಷತ್ರಗಳ ಹೊಳಪು;
ಮರಗಳ ತುಂಬ ಮಿಂಚುಳ್ಳಿ ಮಿಣುಕು,
ಮೋಡಗಳ ನಡುವೆ ಮಿಂಚಿನ ಝಳಪು;
ಬೆಳಕಿಗೆಂದೂ ಬರವಿಲ್ಲ.
ಆದರೆ ಮನಮನದೊಳಗೊಂದೊಂದು
ನಕ್ಷತ್ರವನ್ನಿಡಲು ಏಕೆ ಮರೆತೆ?

ಭೂಮಿಯ ಸಹನೆ, ಅಲೆಗಳ ಚಂಚಲತೆ
ಗಾಳಿಯ ಚೈತನ್ಯ, ಆಗಸದ ಐಕ್ಯತೆ
ಎಲ್ಲವೂ ಕಲಿಕೆಯ ಆಗರ. ಎಲ್ಲಕ್ಕೂ ನೀನೇ ಗುರು
ಎಲ್ಲರೂ ನಿನ್ನ ಕೈಯಲ್ಲಿ ಅಕ್ಷ,
ನೀ ಹೇಳಿದಂತೆ ಇಡೀ ಜಗ.
ಆದರೂ ಮುತ್ತಿದೆ ದ್ವೇಷದ ಹಗೆ; ನೋವಿನ ಧಗೆ
ಶಾಂತಿಯ ಏಕೆ ತುಟ್ಟಿಯಾಗಿಸಿದೆ?

ನಿನ್ನಯ ಬಣ್ಣದ ಬಾಂಡಲಿ ಅಕ್ಷಯ!
ರಂಗಿಗೆ ಬರವಿಲ್ಲ. ರಾಗಕೆ ಮೌನವಿಲ್ಲ
ನೀ ಬರೆವ ಚಿತ್ರಗಳಿಗೆ ಕೊನೆಯಿಲ್ಲ
ಇಡೀ ಬಹ್ಮಾಂಡವೇ ನಿನ್ನ ಕ್ಯಾನ್‌ವಾಸ್
ಎಲ್ಲವೂ ಅಗಾಧ, ಅಕಲಂಕ, ಅಕೃತಿಮ.
ಕಣ್ಣಿಗೆ ಕಾಣದ ಚಿತ್ರಿಕ ನೀನು;
ನಿನ್ನೊಲವು ಅಕ್ಷೀಣ. ನಿನ್ನ ಅಣತಿಗೆ ನಮ್ಮ ಸವಾಲಿಲ್ಲ.
ಎಲ್ಲವ ಹೊತ್ತ ಅಗಧರ ನೀನು. ನಿನಗೆ ನೀನೇ ಸವಾಲು.
ಎಲ್ಲಿರುವ ನೀನು? ಹೇಗಿರುವೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನಳಿದ ಮೇಲೆಯೂ ನನ್ನ ಪ್ರೀತಿಸಲಿಕ್ಕೆ
Next post ಚಿಂತನೆ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

cheap jordans|wholesale air max|wholesale jordans|wholesale jewelry|wholesale jerseys