Home / ಕವನ / ಕವಿತೆ / ದೃಷ್ಟಿ

ದೃಷ್ಟಿ

ಸೀತೆಯ ವೈಭವೀಕರಿಸಿದರು
ಅವಳ ಪತಿಭಕ್ತಿಗಾಗಿ
ಎಲ್ಲೂ ವೈಭವೀಕರಿಸಲಿಲ್ಲ
ಅವಳ ಧೀಃಶಕ್ತಿಗಾಗಿ
ಪರಿತ್ಯಕ್ತ ಹೆಣ್ಣೊಬ್ಬಳು
ಒಬ್ಬಂಟಿಗಳಾಗಿ ಮಕ್ಕಳ ಬೆಳೆಸಿದ
ಅವಳ ಆತ್ಮಶಕ್ತಿಗಾಗಿ!

ತರಲಿಲ್ಲವೇ ಗಾಂಧಾರಿ
ಕುರುರಾಜನಲಿ ಮಾನಸಿಕ ಸಮಸ್ಥಿತಿ?
ಉಕ್ಕಿಸಲಿಲ್ಲವೇ ದ್ರೌಪದಿ
ಪಾಂಡುಪುತ್ರರಲ್ಲಿ ಶಕ್ತಿಯ ವಾರಿಧಿ?
ತೋರಿಸಿಕೊಡಲಿಲ್ಲವೇ ಅವಳು
ಪಂಚಪತಿಯರಿಗೂ ನಿಷ್ಠಳಾಗಿರಬಹುದೆಂದು?
ಮರೆಯಲಿಲ್ಲವೇ ಊರ್ಮಿಳೆ
ವಿರಹದಲ್ಲೂ ತ್ಯಾಗದ ಮೇಲ್ಮೆಯನ್ನು?

ಅಂದಿಗೂ ಇಂದಿಗೂ ಒಂದೇ ದೃಷ್ಟಿ
ಯಾರೂ ಗುರುತಿಸಬಯಸುವುದಿಲ್ಲ
ಸ್ತ್ರೀಯರ ಅಂತಃಶಕ್ತಿಯನ್ನು-
ಪತ್ನಿಯಾಗಿ, ತಾಯಿಯಾಗಿ, ಉದ್ಯೋಗಸ್ಥೆಯಾಗಿ
ಆಕೆ ಮಾಡುವ ತ್ಯಾಗವನ್ನು.

ಎಷ್ಟು ಸ್ತ್ರೀಯರಿಲ್ಲ ನಮ್ಮ ನಿಮ್ಮ ನಡುವೆ
ಎಲ್ಲ ಕಡೆ ಸಮತೋಲನ ಕಾಯ್ದುಕೊಂಡು
ಗಂಧದಂತೆ ತೇಯುವ,
ಚಿನ್ನದಂತೆ ಕಾಯುವ ಸ್ತ್ರೀಶಕ್ತಿಗಳು
ಯಾರು ಗುರುತಿಸಬಯಸುತ್ತಾರೆ
ಅವರ ಶಕ್ತಿ ಸ್ವರೂಪವನ್ನು ?

ಕಾಲ ಬದಲಾದರೂ
ದೃಷ್ಟಿ ಬದಲಾಗಿಲ್ಲ!?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...