Home / ಕವನ / ಕವಿತೆ / ಬಿಡುವು

ಬಿಡುವು

ಜೀವನದಲ್ಲೇನಿದೆ ಎಲ್ಲಾ ಇದ್ದೂ
ಒಂದು ಕ್ಷಣ ಮೈಮರೆತು ನಿಂತು
ಕಣ್ಣೆಟಕುವಷ್ಟು ದೂರದವರೆಗೆ
ದೃಷ್ಟಿ ಹಾಯಿಸಲು ಬಿಡುವಿಲ್ಲದ ಮೇಲೆ?

ಹಸಿರು ಹೊದ್ದ ಮರದ ನೆರಳಲಿ ನಿಂತು
ದನಕರು, ಕುರಿಮಂದೆ ಮೇಯುತ್ತಿರುವಷ್ಟು
ದೂರದವರೆಗೆ ಕಣ್ಣು ಹಿಗ್ಗಿಸಿ
ನೋಡಲು ಬಿಡುವಿಲ್ಲದ ಮೇಲೆ?

ದಟ್ಟಡವಿಯಲಿ ಹಾದು ಹೋಗುವಾಗ
ಹಣ್ಣಾಗಿ ಉದುರಿದ್ದ ಬೀಜಗಳ ಹೆಕ್ಕಿ ಹುಲ್ಲಿನ ಪೊದೆಗಳಲ್ಲಿ
ಅಡಗಿಸಿಡುವ ಅಳಿಲಿನ ತುಂಟಾಟವ ನೋಡಿ
ನಗಲು ಬಿಡುವಿಲ್ಲದ ಮೇಲೆ?

ನಕ್ಷತ್ರಗಳು ಫಳಫಳಿಸುವ ರಾತ್ರಿಯಾಕಾಶವನ್ನು ನೆನಪಿಸುವಂತೆ
ಜುಳು ಜುಳು ಹರಿವ ನೀರಲ್ಲಿ ರವಿಕಿರಣ ಪ್ರತಿಫಲಿಸಿ
ಮಟಮಟ ಮಧ್ಯಾಹ್ನದಲಿ ನಕ್ಷತ್ರಗಳ ಹಿಂಡನ್ನೇ ಸೃಷ್ಟಿಸಿರುವ
ಅಂದವ ನೋಡಿ ಆನಂದಿಸಲು ಬಿಡುವಿಲ್ಲದ ಮೇಲೆ?

ಬಿಡುವಿಲ್ಲ, ನಮಗೆ ಯಾವುದಕ್ಕೂ ಬಿಡುವಿಲ್ಲ
ಪ್ರಕೃತಿ ದೇವಿ ಸೌಂದರ್‍ಯ ಸ್ಪರ್ಧೆಯಲ್ಲಿ ಪಂಥ ಕಟ್ಟಿ
ನಲಿಯುವುದ ನೋಡಲು, ಅವಳ ಕಣ್ಣಲ್ಲಿ ಮಿಂಚಿದ ನಗು
ಹೂವಾಗಿ ಗಿಡಗಳಲ್ಲಿ ಬಿರಿಯುವುದ ನೋಡಲು ಬಿಡುವಿಲ್ಲ

ಎಲ್ಲಾ ಇದ್ದರೂ ಒಂದು ಕ್ಷಣ ಮೈಮೆರತು ನಿಂತು
ಕಣ್ಣೆಟಕುವಷ್ಟು ದೂರದವರೆಗೆ ದೃಷ್ಟಿಹಾಯಿಸಲು ನಮಗೆ ಬಿಡುವಿಲ್ಲ.
ಯಾವುದಕ್ಕೂ ಬಿಡುವಿಲ್ಲದ ಜೀವನಕ್ಕೇನರ್‍ಥ?
ಅದು ಏನೂ ಇಲ್ಲದ ಬರಡು ಬಂಜರುಭೂಮಿ!
*****
(ಸರ್ ವಿಲಿಯಂ ಹೆನ್ರಿ ಡೇವಿಸ್‌ರವರ ‘ಲೀಜರ್’ ಕವನದಿಂದ ಪ್ರೇರಿತ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...