Home / ಕವನ / ಕವಿತೆ / ಬಿಡುವು

ಬಿಡುವು

ಜೀವನದಲ್ಲೇನಿದೆ ಎಲ್ಲಾ ಇದ್ದೂ
ಒಂದು ಕ್ಷಣ ಮೈಮರೆತು ನಿಂತು
ಕಣ್ಣೆಟಕುವಷ್ಟು ದೂರದವರೆಗೆ
ದೃಷ್ಟಿ ಹಾಯಿಸಲು ಬಿಡುವಿಲ್ಲದ ಮೇಲೆ?

ಹಸಿರು ಹೊದ್ದ ಮರದ ನೆರಳಲಿ ನಿಂತು
ದನಕರು, ಕುರಿಮಂದೆ ಮೇಯುತ್ತಿರುವಷ್ಟು
ದೂರದವರೆಗೆ ಕಣ್ಣು ಹಿಗ್ಗಿಸಿ
ನೋಡಲು ಬಿಡುವಿಲ್ಲದ ಮೇಲೆ?

ದಟ್ಟಡವಿಯಲಿ ಹಾದು ಹೋಗುವಾಗ
ಹಣ್ಣಾಗಿ ಉದುರಿದ್ದ ಬೀಜಗಳ ಹೆಕ್ಕಿ ಹುಲ್ಲಿನ ಪೊದೆಗಳಲ್ಲಿ
ಅಡಗಿಸಿಡುವ ಅಳಿಲಿನ ತುಂಟಾಟವ ನೋಡಿ
ನಗಲು ಬಿಡುವಿಲ್ಲದ ಮೇಲೆ?

ನಕ್ಷತ್ರಗಳು ಫಳಫಳಿಸುವ ರಾತ್ರಿಯಾಕಾಶವನ್ನು ನೆನಪಿಸುವಂತೆ
ಜುಳು ಜುಳು ಹರಿವ ನೀರಲ್ಲಿ ರವಿಕಿರಣ ಪ್ರತಿಫಲಿಸಿ
ಮಟಮಟ ಮಧ್ಯಾಹ್ನದಲಿ ನಕ್ಷತ್ರಗಳ ಹಿಂಡನ್ನೇ ಸೃಷ್ಟಿಸಿರುವ
ಅಂದವ ನೋಡಿ ಆನಂದಿಸಲು ಬಿಡುವಿಲ್ಲದ ಮೇಲೆ?

ಬಿಡುವಿಲ್ಲ, ನಮಗೆ ಯಾವುದಕ್ಕೂ ಬಿಡುವಿಲ್ಲ
ಪ್ರಕೃತಿ ದೇವಿ ಸೌಂದರ್‍ಯ ಸ್ಪರ್ಧೆಯಲ್ಲಿ ಪಂಥ ಕಟ್ಟಿ
ನಲಿಯುವುದ ನೋಡಲು, ಅವಳ ಕಣ್ಣಲ್ಲಿ ಮಿಂಚಿದ ನಗು
ಹೂವಾಗಿ ಗಿಡಗಳಲ್ಲಿ ಬಿರಿಯುವುದ ನೋಡಲು ಬಿಡುವಿಲ್ಲ

ಎಲ್ಲಾ ಇದ್ದರೂ ಒಂದು ಕ್ಷಣ ಮೈಮೆರತು ನಿಂತು
ಕಣ್ಣೆಟಕುವಷ್ಟು ದೂರದವರೆಗೆ ದೃಷ್ಟಿಹಾಯಿಸಲು ನಮಗೆ ಬಿಡುವಿಲ್ಲ.
ಯಾವುದಕ್ಕೂ ಬಿಡುವಿಲ್ಲದ ಜೀವನಕ್ಕೇನರ್‍ಥ?
ಅದು ಏನೂ ಇಲ್ಲದ ಬರಡು ಬಂಜರುಭೂಮಿ!
*****
(ಸರ್ ವಿಲಿಯಂ ಹೆನ್ರಿ ಡೇವಿಸ್‌ರವರ ‘ಲೀಜರ್’ ಕವನದಿಂದ ಪ್ರೇರಿತ)

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...