Home / ಕವನ / ಕವಿತೆ / ಬಿಡುವು

ಬಿಡುವು

ಜೀವನದಲ್ಲೇನಿದೆ ಎಲ್ಲಾ ಇದ್ದೂ
ಒಂದು ಕ್ಷಣ ಮೈಮರೆತು ನಿಂತು
ಕಣ್ಣೆಟಕುವಷ್ಟು ದೂರದವರೆಗೆ
ದೃಷ್ಟಿ ಹಾಯಿಸಲು ಬಿಡುವಿಲ್ಲದ ಮೇಲೆ?

ಹಸಿರು ಹೊದ್ದ ಮರದ ನೆರಳಲಿ ನಿಂತು
ದನಕರು, ಕುರಿಮಂದೆ ಮೇಯುತ್ತಿರುವಷ್ಟು
ದೂರದವರೆಗೆ ಕಣ್ಣು ಹಿಗ್ಗಿಸಿ
ನೋಡಲು ಬಿಡುವಿಲ್ಲದ ಮೇಲೆ?

ದಟ್ಟಡವಿಯಲಿ ಹಾದು ಹೋಗುವಾಗ
ಹಣ್ಣಾಗಿ ಉದುರಿದ್ದ ಬೀಜಗಳ ಹೆಕ್ಕಿ ಹುಲ್ಲಿನ ಪೊದೆಗಳಲ್ಲಿ
ಅಡಗಿಸಿಡುವ ಅಳಿಲಿನ ತುಂಟಾಟವ ನೋಡಿ
ನಗಲು ಬಿಡುವಿಲ್ಲದ ಮೇಲೆ?

ನಕ್ಷತ್ರಗಳು ಫಳಫಳಿಸುವ ರಾತ್ರಿಯಾಕಾಶವನ್ನು ನೆನಪಿಸುವಂತೆ
ಜುಳು ಜುಳು ಹರಿವ ನೀರಲ್ಲಿ ರವಿಕಿರಣ ಪ್ರತಿಫಲಿಸಿ
ಮಟಮಟ ಮಧ್ಯಾಹ್ನದಲಿ ನಕ್ಷತ್ರಗಳ ಹಿಂಡನ್ನೇ ಸೃಷ್ಟಿಸಿರುವ
ಅಂದವ ನೋಡಿ ಆನಂದಿಸಲು ಬಿಡುವಿಲ್ಲದ ಮೇಲೆ?

ಬಿಡುವಿಲ್ಲ, ನಮಗೆ ಯಾವುದಕ್ಕೂ ಬಿಡುವಿಲ್ಲ
ಪ್ರಕೃತಿ ದೇವಿ ಸೌಂದರ್‍ಯ ಸ್ಪರ್ಧೆಯಲ್ಲಿ ಪಂಥ ಕಟ್ಟಿ
ನಲಿಯುವುದ ನೋಡಲು, ಅವಳ ಕಣ್ಣಲ್ಲಿ ಮಿಂಚಿದ ನಗು
ಹೂವಾಗಿ ಗಿಡಗಳಲ್ಲಿ ಬಿರಿಯುವುದ ನೋಡಲು ಬಿಡುವಿಲ್ಲ

ಎಲ್ಲಾ ಇದ್ದರೂ ಒಂದು ಕ್ಷಣ ಮೈಮೆರತು ನಿಂತು
ಕಣ್ಣೆಟಕುವಷ್ಟು ದೂರದವರೆಗೆ ದೃಷ್ಟಿಹಾಯಿಸಲು ನಮಗೆ ಬಿಡುವಿಲ್ಲ.
ಯಾವುದಕ್ಕೂ ಬಿಡುವಿಲ್ಲದ ಜೀವನಕ್ಕೇನರ್‍ಥ?
ಅದು ಏನೂ ಇಲ್ಲದ ಬರಡು ಬಂಜರುಭೂಮಿ!
*****
(ಸರ್ ವಿಲಿಯಂ ಹೆನ್ರಿ ಡೇವಿಸ್‌ರವರ ‘ಲೀಜರ್’ ಕವನದಿಂದ ಪ್ರೇರಿತ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...