ಸಂಶಯವೆ

ಸುಳಿಯದಿರು ಸಂಶಯವೆ
ನನ್ನವರ ಸನಿಹದಲಿ
ಬೆರಸದಿರು ವಿಷವನ್ನು ಅನ್ನದಲ್ಲಿ

ಬಾಳನಂದನ ವನವ
ತುಳಿದು ತೊತ್ತಳಗೈದು
ತುತ್ತದಿರು ಇದನಿನ್ನ ಒಡಲಿನಲ್ಲಿ

ನಿನ್ನ ರಾಕ್ಷಸ ಕೃತ್ಯ
ವಿಷಮತೆಗೆ ಮೊದಲಹುದು
ದೂರಸರಿ ಸುಳಿಯುವುದೆ ನೀನು ಇಲ್ಲಿ?

ವಿಶ್ವಾಸವೆಂಬುವದು
ತತ್ತರಿಸಿ ಬೀಳುವದು
ಮುರಿಯದಿರು ಒಗೆಯದಿರು ಬಳ್ಳಿಚೆಲ್ಲಿ

ನಿನ್ನ ಕಾವಿಗೆ ಕಂದಿ
ಹೋಗುವದು ಕಗ್ಗನೇ
ಸ್ನೇಹಲತೆ ಸಾಕು, ಸರಿ, ದೇವರಾಣೆ

ನೀನು ಇದ್ದೆದೆ ಮಸಣ
ಮರುಭೂಮಿ ನರಕವದೆ
ಬಾರದಿರು ತೊಳಗುತಿದೆ ಮನದ ಕೋಣೆ

ದ್ವೇಷದುಸ್ವಾರ್ಥಕ್ಕೆ
ಕೋಪ ಮಾತ್ಸರ್ಯಕ್ಕೆ
ಹೀನ ಕೃತ್ಯಕ್ಕೆಲ್ಲ ನೀನೆ ಅನ್ನ

ದೇವ, ಕಾಯ್ ನನ್ನವರ
ಸಂಶಯದ ಬಲೆಯಿಂದ |
ಬಡಿಸದಿರು ಉಣಿಸದಿರು ಹೀನ ಬನ್ನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೦೯
Next post ರಾವಣಾಂತರಂಗ – ೨

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…