ನಿಸರ್‍ಗ

ಮುಗಿಲ ನೀಲಿಯ ಬಣ್ಣ ಹಲವು ಹೂಗಳ ಬಣ್ಣ
ನಿಂತ ನೆಲದಾಸೊಬಗೊ ಹರಿವ ನೀರಿನ ಬೆಡಗೊ
ಒಂದೆರಡೆ ಸೌಭಾಗ್ಯ ನೋಡೆ ಸಾಲದು ಕಣ್ಣ
ಈ ವಿಶ್ವದೈಸಿರಿಯ ಮುಖಕೆಲ್ಲಿ ಇಹುದೆಡರೊ?

ಸಿಡಿಲಾಗಿ ಗುಡುಗುವದು ನೀರೆಯೋಲು ಮೆರೆಯುವದು
ಭಕ್ತನೋಲು ಸಂತಸದಿ ಕುಣಿದಾಡಿ ನಲಿಯುವದು
ನಿತ್ಯ ನೂತನವಾಗಿ ಚಿತ್ತದಲಿ ಮೆರೆಯುವದು
ಎಂದಿಗಿದರಾಳವದು ಯಾರಿಂಗೆ ತಿಳಿಯುವದು?

ವಿಶ್ವರೂಪವ ಕಂಡು ನಡುನಡುಗಿ ಬೀಳುತಿಹ
ಅರ್ಜುನನ ತೆರದಿನಾ ಓ ನಿಸರ್‍ಗವೆ ನಿನ್ನ
ರುದ್ರರೂಪವ ಕಂಡು ಕಂಪಿಸುವೆ ಹೂಳುತಿಹ
ಭೀಕರತೆಯನ್ನತ್ತ ನೂಕಿ ಮಾತೆಯೆ ಎನ್ನ

ಮನವನ್ನು ಸಂತೈಸು ರಾಮಣೀಯಕ ರೂಪ
ತೋರಿ ತೇಲಿಸು ತಾಯೆ ಕಳೆದೆನ್ನ ಈ ತಾಪ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೦
Next post ರಾವಣಾಂತರಂಗ – ೪

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ದೊಡ್ಡ ಬೋರೇಗೌಡರು

    ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…