ನಿನ್ನ ಹಳಿದರೆ ಲೋಕ ಅದು ನಿನ್ನ ತಪ್ಪಲ್ಲ

ನಿನ್ನ ಹಳಿದರೆ ಲೋಕ ಅದು ನಿನ್ನ ತಪ್ಪಲ್ಲ,
ಉತ್ತಮರು ನಿಂದೆಮಾತಿಗೆ ಸದಾ ಸಿಕ್ಕವರೆ;
ಸೌಂದರ್‍ಯದಾಭರಣ ಸಂಶಯಕೆ ಹೊರತಲ್ಲ
ನಿರ್‍ಮಲಾಕಾಶದಲೂ ಕಾಗೆ ಹಾರುವುದೇ.
ನೀನು ಯೋಗ್ಯನೆ, ನಿನ್ನ ಕುರಿತ ಆರೋಪಗಳು
ನಿನ್ನ ಮೇಲ್ಮೆಯನೆ ಹೇಳುವುವು, ಕೇಡೂ ಬಿಡದೆ
ವಿಷಕೀಟದಂತೆ ಮೊಗ್ಗನ್ನೆ ಸಾರುವುದು,
ನೀ ಮಾತ್ರ ನಿರ್‍ದಿಷ್ಟ ತಾರುಣ್ಯವನೆ ಮೆರೆವೆ.
ನಿನ್ನ ಯೌವನ ಹೊಂಚುಗಳನು ದಾಟಿರುವುದು
ಆಕ್ರಮಣಕೇ ಸಿಗದೆ, ಅಥವ ಎದುರಿಸಿ ಉಳಿದು;
ಈ ಕೀರ್‍ತಿ ತಡೆಯದು ಬೆಳೆವ ಅಸಹನೆಯನ್ನು,
ಹಾಗೆಂದೆ ನಿನ್ನ ಕೀರ್‍ತಿಯು ಕೊಡ ಮಸುಳುವುದು.

ಕೆಟ್ಟುದರ ಶಂಕೆ ಕವಿಯದೊ ನಿನ್ನ ನಡತೆಗೆ
ಆಗ ನೀನೇ ಪ್ರಭು ಹೃದಯಸಾಮ್ರಾಜ್ಯಕ್ಕೆ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 70
That thou art blam’d shall not be thy defect

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉತ್ತರಣ – ೧೪
Next post ಹಾರೈಕೆ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…