ಎರಡೆ ದಿನ ಹಿಂದೆ ಇನಿವಕ್ಕಿ ಚಿಲಿಪಿಲಿ ದನಿಯ

ಎರಡೆ ದಿನ ಹಿಂದೆ ಇನಿವಕ್ಕಿ ಚಿಲಿಪಿಲಿ ದನಿಯ
ಗಾನವೇದಿಕೆಯೆನಿಸಿ, ಝಗಝಗಿಸಿ, ಈಗ ಬರಿ
ಹಣ್ಣೆಲೆಯೆ ತುಂಬಿರುವ, ಇಲ್ಲ ಒಂದೆರಡಿರುವ,
ಅಥವ ಚಳಿಕೊರೆತಕ್ಕೆ ಬೆದರಿ ಎಲ್ಲಾ ಉದುರಿ
ಭಣಗುಡುವ ಒಣಕೊಂಬೆ ಕಾಂಡಗಳ ಹೇಮಂತ
ನನ್ನ ಮೈಯಲ್ಲಿ ನೆಲೆ ಹೂಡುವುದ ನೋಡುವೆ.
ಎಲ್ಲವನು ಮೆಲ್ಲಮೆಲ್ಲನೆ ನುಂಗಿ ನೊಣೆವಂಥ
ಮೃತ್ಯುವಿನ ಛಾಯೆ, ಕಪ್ಪನೆ ರಾತ್ರಿ, ಮೆಲ್ಲನೆ
ಮುಗಿದ ಹಗಲಿನ ಮಿಕ್ಕ ಬಡಬೆಳಕನೊಯ್ಯುವುದ
ನನ್ನಲ್ಲಿ ಕಾಣುವೆ, ತಾನು ಎಬ್ಬಿಸಿದುರಿಗೆ
ತಾನೆ ಆಹುತಿಬಿದ್ದು ಅಳಿದುಳಿದ ಯೌವನದ
ಬೂದಿ ಬೆಳಕನ್ನು ಈ ಮೈಯಲ್ಲಿ ನೋಡುವೆ,

ಇದನೆಲ್ಲ ನೋಡುತ್ತ ನಿನ್ನೊಲುಮೆ ಬೆಚ್ಚುವುದು
ಕಳೆಯಲಿರುವಂಥ ಪ್ರೀತಿಯ ಆಳ ಹೆಚ್ಚುವುದು
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 73
That time of year thou mayst in me behold

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾವಣಾಂತರಂಗ – ೩
Next post ದೃಷ್ಟಿ

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys