ಎರಡೆ ದಿನ ಹಿಂದೆ ಇನಿವಕ್ಕಿ ಚಿಲಿಪಿಲಿ ದನಿಯ

ಎರಡೆ ದಿನ ಹಿಂದೆ ಇನಿವಕ್ಕಿ ಚಿಲಿಪಿಲಿ ದನಿಯ
ಗಾನವೇದಿಕೆಯೆನಿಸಿ, ಝಗಝಗಿಸಿ, ಈಗ ಬರಿ
ಹಣ್ಣೆಲೆಯೆ ತುಂಬಿರುವ, ಇಲ್ಲ ಒಂದೆರಡಿರುವ,
ಅಥವ ಚಳಿಕೊರೆತಕ್ಕೆ ಬೆದರಿ ಎಲ್ಲಾ ಉದುರಿ
ಭಣಗುಡುವ ಒಣಕೊಂಬೆ ಕಾಂಡಗಳ ಹೇಮಂತ
ನನ್ನ ಮೈಯಲ್ಲಿ ನೆಲೆ ಹೂಡುವುದ ನೋಡುವೆ.
ಎಲ್ಲವನು ಮೆಲ್ಲಮೆಲ್ಲನೆ ನುಂಗಿ ನೊಣೆವಂಥ
ಮೃತ್ಯುವಿನ ಛಾಯೆ, ಕಪ್ಪನೆ ರಾತ್ರಿ, ಮೆಲ್ಲನೆ
ಮುಗಿದ ಹಗಲಿನ ಮಿಕ್ಕ ಬಡಬೆಳಕನೊಯ್ಯುವುದ
ನನ್ನಲ್ಲಿ ಕಾಣುವೆ, ತಾನು ಎಬ್ಬಿಸಿದುರಿಗೆ
ತಾನೆ ಆಹುತಿಬಿದ್ದು ಅಳಿದುಳಿದ ಯೌವನದ
ಬೂದಿ ಬೆಳಕನ್ನು ಈ ಮೈಯಲ್ಲಿ ನೋಡುವೆ,

ಇದನೆಲ್ಲ ನೋಡುತ್ತ ನಿನ್ನೊಲುಮೆ ಬೆಚ್ಚುವುದು
ಕಳೆಯಲಿರುವಂಥ ಪ್ರೀತಿಯ ಆಳ ಹೆಚ್ಚುವುದು
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 73
That time of year thou mayst in me behold

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾವಣಾಂತರಂಗ – ೩
Next post ದೃಷ್ಟಿ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…