ಶಾಂತವಾಗಿರು; ಕ್ರೂರ ಕಾಲ ನನ್ನನ್ನು ಸೆರೆಹಿಡಿದು

ಶಾಂತವಾಗಿರು; ಕ್ರೂರ ಕಾಲ ನನ್ನನ್ನು ಸೆರೆ-
ಹಿಡಿದು ಜಾಮೀನಿರದೆ ಕೊಂಡೊಯ್ಯುತಿರುವಾಗ.
ಈ ಬರೆಹ ತಾಗಿಕೊಂಡಿದೆ ನನ್ನ ಬಾಳಿಗೆ,
ಇರಲಿ ಇದು ನಿನ್ನ ಬಳಿ, ನಿನಗಿತ್ತ ಸ್ಮಾರಕ.
ಇವನು ನೋಡುತ್ತಿರಲು ಮೊಳೆಯುವುದು ತಾನಾಗಿ
ನಿನಗಾಗಿ ಹರಸಿಟ್ಟ ಮುಡಿಪು ಇದು ಎನ್ನುವುದು ;
ನೆಲಕ್ಕೆ ಸಲ್ಲುವ ಭಾಗವಷ್ಟೂ ನೆಲಕ್ಕೆ ಹೋಗಿ
ನನ್ನುತ್ತಮಾಂಶ ಇದು ನಿನಗಷ್ಟೆ ಸೇರುವುದು.
ಮೈಚರಟ, ಹುಳುವಿನಾಹಾರ, ಉಸಿರಳಿದ ಶವ,
ನೀಚ ಚೂರಿಯ ಇರಿತ ಪಡೆದ ಬಡಗೆಲುವು,
ಇವು ನೀನು ನೆನೆಯಲೂ ಯೋಗ್ಯವಲ್ಲದ ಕಸ-
ನಿನ್ನಿಂದ ಇವು ಮಾತ್ರ ದೂರವಾಗುಳಿಯುವುವು.

ಕೃತಿಯ ಹೂರಣದಲ್ಲಿ ಇದೆ ಅದರ ನಿಜಸತ್ವ!
ಅದು ನೋಡು ಇಲ್ಲಿದೆ, ನಿನ್ನದಾಗಿದೆ ನಿತ್ಯ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 74
But the contented when that fell arrest

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾವಣಾಂತರಂಗ – ೪
Next post ಬಿಡುವು

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

cheap jordans|wholesale air max|wholesale jordans|wholesale jewelry|wholesale jerseys